bhadravati crime news / ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಕ್ರಿಕೆಟ್ ವಿಚಾರಕ್ಕೆ ಓರ್ವನ ಕೊಲೆಯಾಗಿದ್ದು, ಇನ್ನೊಬ್ಬನಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ನಿನ್ನೆ ಸಂಜೆ ಇಲ್ಲಿನ ಯುವಕರ ಗುಂಪು, ಕ್ರಿಕೆಟ್ ಆಡಿದ್ದು, ಆನಂತರ ಕ್ರಿಕೆಟ್ನಲ್ಲಿನ ವಿಚಾರವೊಂದಕ್ಕೆ ಪರಸ್ಪರ ಕಿತ್ತಾಡಿದ್ದಾರೆ. ಈ ವಿಷಯ ಅಲ್ಲಿಗೆ ಮುಗಿದಿತ್ತಾದರೂ, ಒಂದು ಗುಂಪು ಪುನಃ ರಾತ್ರಿ ಮಾತನಾಡಬೇಕು ಎಂದು ಕರೆದು ತಗಾದೆ ತೆಗೆದು ಅರುಣ್ ಹಾಗೂ ಸಂಜಯ್ ಎಂಬಾತನ ಮೇಲೆ ಹಲ್ಲೆ ಮಾಡಿದೆ. ಈ ವೇಳೆ ಭರ್ಚಿಯಿಂದ ಇರಿದಿದ್ದು, ಘಟನೆಯಲ್ಲಿ ಅರುಣ್ ಸಾವನ್ನಪ್ಪಿದ್ದಾನೆ. ಇನ್ನೊಬ್ಬ ಸಂಜಯ್ ಗಂಭೀರವಾಗಿ ಗಾಯಗೊಂಡಿದ್ದಾನೆ.
bhadravati crime news/ ಎಸ್ಪಿ ಮಿಥುನ್ ಕುಮಾರ್
ಈ ಬಗ್ಗೆ ಮಾಧ್ಯಮ ವಾಟ್ಸಾಪ್ ಗ್ರೂಪ್ನಲ್ಲಿ ಸಂದೇಶ ನೀಡಿರುವ ಎಸ್ಪಿ ಮಿಥುನ್ ಕುಮಾರ್, ಕ್ರಿಕೆಟ್ ವಿಚಾರಕ್ಕೆ ಈ ಘಟನೆ ನಡೆದಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಇನ್ನಷ್ಟು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.