bhadravati : ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಕ್ಷಾಂತರ ಮೌಲ್ಯದ ಬಂಗಾರ ಹಾಗೂ ನಗದನ್ನು ಕದ್ದು ಪರಾರಿಯಾಗಿದ್ದ ಕಳ್ಳನನ್ನು ಇಂದು ಪೊಲೀಸರು ಬಂಧಿಸಿದ್ದಾರೆ.
bhadravati : ಏನಿದು ಪ್ರಕರಣ
ಮೇ 02- 2024 ರಂದು ಭದ್ರಾವತಿಯ ಮೀನು ವ್ಯಾಪಾರಿ ಬಾಲಕೃಷ್ಣನ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿತ್ತು. ಯಾರೋ ಕಳ್ಳರು ಮನೆಯ ಮೇಲಿನ ಸಿಮೆಂಟ್ ಶೀಟನ್ನು ಒಡೆದು ಮನೆಯ ಒಳಗೆ ಪ್ರವೇಶಿಸಿ ಬೀರುವಿನಲ್ಲಿದ್ದ ಒಂದು ಲಕ್ಷ ರೂಪಾಯಿ ಮೌಲ್ಯದ ಬಂಗಾರದ ಆಭರಣ, ವಾಚ್ ಮತ್ತು ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಹಿನ್ನಲೆ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣ ಸಂಬಂಧ ಪೊಲೀಸರು ತಂಡ ರಚಿಸಿ ಕಳ್ಳರ ಪತ್ತೆಗೆ ಬಲೆ ಬೀಸಿದ್ದರು. ಈ ಹಿನ್ನಲೆ ಪೊಲೀಸರಿಗೆ ಆರೋಪಿಯಾದ ಜೈಕಾಂತ್ ಪಿ, (21 ) ಎಂಬುವವನು ಪೊಲೀಸರಿಗೆ ಮಾಲು ಸಹಿತ ಸಿಕ್ಕಿ ಬಿದ್ದಿದ್ದಾನೆ. ನಂತರ ಆತನನ್ನು ಪೊಲೀಸರು ದಸ್ತಗಿರಿ ಮಾಡಿ ಪ್ರಕರಣಕ್ಕೆ ಸಂಬಂಧಿಸಿದ ಅಂದಾಜು ಮೌಲ್ಯ 1,12,000 ರೂಪಾಯಿಗಳ 11 ಗ್ರಾಂ 300 ಮಿಲಿ ತೂಕದ ಬಂಗಾರದ ಅಭರಣ, 2 ಸಾವಿರ ರೂಪಾಯಿ ಮೌಲ್ಯದ ಒಂದು ವಾಚ್ ಮತ್ತು ಕೃತ್ಯಕ್ಕೆ ಬಳಸಿದ ಒಪ್ಪೋ ಮೊಬೈಲ್ನ್ನು ವಶಪಡಿಸಿಕೊಂಡಿದ್ದಾರೆ.