ಪಾಟ್ ಒಡೆದವನನ್ನು ದೇವಸ್ಥಾನದಲ್ಲಿ ಕೂಡಿ ಹಾಕಿ ಪೊಲೀಸರಿಗೆ ದೂರು ನೀಡಿದ ಗ್ರಾಮಸ್ಥರು

ಹಂಚಿಕೊಳ್ಳಿ
WhatsApp Facebook X Telegram
Bhadravati Man Locked in Temple After Vandalism
Bhadravati Man Locked in Temple After Vandalism

ಭದ್ರಾವತಿ: ಹಣಕಾಸಿನ ವಿಚಾರವಾಗಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರು ಹಿಡಿದು ದೇವಸ್ಥಾನದಲ್ಲಿ ಕೂಡಿ ಹಾಕಿದ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶಿವಮೊಗ್ಗ: ಸಿಟಿ ಬಸ್‌ಗಳಲ್ಲಿ ಕಿರಿಕಿರಿ ಉಂಟಾಗುತ್ತಿದೆಯೇ? ಈ ನಂಬರ್‌ಗೆ ಕಾಲ್ ಮಾಡಿ

Bhadravati ಘಟನೆಯ ವಿವರ

ಭದ್ರಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರುದಾರರಿಗೂ ಹಾಗೂ ಎದುರುದಾರರಿಗೂ ಹಣಕಾಸಿನ ವಿಚಾರವಾಗಿ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ಎದುರುದಾರನು ದೂರುದಾರರ ಮನೆಯ ಕಿಟಕಿ ಗಾಜು ಹಾಗೂ ಹೂವಿನ ಪಾಟ್‌ಗಳನ್ನು ಒಡೆದು ಹಾಕಿದ್ದಾನೆ. ಈ ಹಿನ್ನೆಲೆಯಲ್ಲಿ ದೂರುದಾರರು ಗ್ರಾಮಸ್ಥರ ಸಹಾಯದಿಂದ ಆತನನ್ನು ಹಿಡಿದು ಗ್ರಾಮದ ದೇವಸ್ಥಾನವೊಂದರಲ್ಲಿ ಕೂಡಿ ಹಾಕಿದ್ದಾರೆ.

ನಂತರ 112 ಸಿಬ್ಬಂದಿಗೆ ಫೋನ್ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮುಂದಿನ ಕ್ರಮಕ್ಕಾಗಿ ಆತನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor