ಹೋಟೆಲ್​ನಲ್ಲಿ ಊಟವಿಲ್ಲ ಎಂದ ಮಾಲೀಕ : ಮಚ್ಚು ಬೀಸಿದ ಗ್ರಾಹಕ : ಏನಿದು ಘಟನೆ 

This Article Written by / Prathapa thirthahalli / ಅಕ್ಟೋಬರ್ 13, 2025

Neighbours Clash Shivamogga Jail ScandalShimoga 5 Year Jail for Husband in Dowry CaseUnidentified Man Suicide Shivamogga news today Facebook investment fraud Bhadravati news Gokarna Om Beach  Sagara news today   Malur police station 

Bhadravati news : ಭದ್ರಾವತಿಯ ವೀರಶೈವ ಸಭಾ ಭವನದ ಎದುರಿಗಿರುವ ‘ರಾಮಾವರಂ’ ಹೋಟೆಲ್ ಮಾಲೀಕರ ಮೇಲೆ, ಗ್ರಾಹಕನೊಬ್ಬ ಊಟ ನೀಡಲಿಲ್ಲ ಎಂಬ ಕಾರಣಕ್ಕೆ ಕೊಲೆ ಯತ್ನ ನಡೆಸಿರುವ ಘಟನೆ ಅಕ್ಟೋಬರ್ 9 ರ ರಾತ್ರಿ ನಡೆದಿದೆ. ಈ ಸಂಬಂಧ ಹೋಟೆಲ್ ಮಾಲೀಕರು ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

ಹೋಟೆಲ್​ ಮಾಲೀಕರು ಪ್ರತಿದಿನದಂತೆ ಅಂದು ರಾತ್ರಿ 10:00 ಗಂಟೆ ಸುಮಾರಿಗೆ ಹೋಟೆಲ್ ಮುಚ್ಚಲು ಸಿದ್ಧತೆ ನಡೆಸುತ್ತಿದ್ದರು. ಇದೇ ಸಮಯದಲ್ಲಿ, ವ್ಯಕ್ತಿಯೊಬ್ಬ ಕಬ್ಬಿಣದ ಮಚ್ಚು ಹಿಡಿದು ಹೋಟೆಲ್‌ಗೆ ಬಂದಿದ್ದಾನೆ. ನಂತರ ಮಾಲೀಕರ ಬಳಿ  ಊಟ ಇದೆಯಾ ಎಂದು ಕೇಳಿದ್ದಾನೆ. ಹೋಟೆಲ್ ಕ್ಲೋಸ್ ಮಾಡಿರುವುದರಿಂದ ಊಟ ಇಲ್ಲ ಎಂದು ಮಾಲೀಕರು ತಿಳಿಸಿದಾಗ. ನನಗೆ ಈಗಲೇ ಊಟ ಬೇಕು, ಇಲ್ಲದಿದ್ದರೆ ಇದೇ ಮಚ್ಚಿನಿಂದ ಹೊಡೆದು ಕೊಲೆ ಮಾಡುತ್ತೇನೆ” ಎಂದು ಬೆದರಿಸಿ ಹರಿತವಾದ ಮಚ್ಚನ್ನು ಬಿಲ್ಲಿಂಗ್ ಕೌಂಟರ್ ಮೇಲೆ ಇಟ್ಟಿದ್ದಾನೆ. ನಂತರ ಮಲೀಕನ ಮೇಳೆ ಮಚ್ಚು ಬೀಸಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ  ಭಯಗೊಂಡ  ಮಾಲೀಕ ಹೊರಗೆ ಹೋಗಲು ಹೋಟೆಲ್ ಮೆಟ್ಟಿಲು ಇಳಿಯುತ್ತಿದ್ದಾಗ, ಕೆಳಗೆ ಬಿದ್ದಿದ್ದಾರೆ.  ಈ ವೇಳೇ ಹೋಟೆಲ್​ ಸಿಬ್ಬಂದಿಳು ಸ್ಥಳಕ್ಕೆ ಬಂದು ಮಾಲೀಕರನ್ನು ರಕ್ಷಿಸಿದ್ದಾರೆ.

Bhadravati news

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಂದಿನ ಸುದ್ದಿ ಒದಿ

Leave a Comment