Bhadravati Robbery Conspiracy Case Five ಶಿವಮೊಗ್ಗ : ಭದ್ರಾವತಿಯಲ್ಲಿ ದರೋಡೆಗೆ ಸ್ಕೆಚ್ ಹಾಕಿದ ಪ್ರಕರಣದಲ್ಲಿ ಟಿಪ್ಪು ನಗರದ ನಿವಾಸಿಗಳು ಸೇರಿದಂತೆ ಒಟ್ಟು ಐವರು ಅಪರಾಧಿಗಳಿಗೆ ಕೋರ್ಟ್ 10 ವರ್ಷ ಕಠಿಣ ಸಜೆ ಮತ್ತು ದಂಡ ವಿಧಿಸಿದೆ

ಭದ್ರಾವತಿಯಲ್ಲಿ ದಿನಾಂಕ 01-02-2019 ರಂದು ನಡೆದಿದ್ದ ಪ್ರಕರಣ/Bhadravati Robbery Conspiracy Case Five
ಭದ್ರಾವತಿಯ ಗೋಂದಿ ಕೈಮರದ ಬಳಿ ನಡೆದಿದ್ದ ಘಟನೆ ಇದಾಗಿದದೆ. ದರೋಡೆಗೆ ಸ್ಕೆಚ್ ಹಾಕುತ್ತಿದ್ದ ಐವರು ಆರೋಪಿತರ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಭದ್ರಾವತಿಯ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ , ಎಲ್ಲಾ ಆರೋಪಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ
01-02-2019 ರ ರಾತ್ರಿ ಐವರು ಆರೋಪಿಗಳು ಮರದ ದೊಣ್ಣೆ, ಚಾಕು, ಖಾರದ ಪುಡಿ ಮತ್ತು ರಾಡ್ಗಳನ್ನ ಬಳಸಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ಅಡ್ಡಹಾಕಲು ಯತ್ನಸ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನಲೆಯಲ್ಲಿ ರೇಡ್ ನಡೆಸಿದ್ದ ಪೊಲೀಸರ ಕೈಯಿಂದ ಓರ್ವ ಆರೋಪಿ ತಪ್ಪಿಸಿಕೊಂಡಿದ್ದ. ಉಳಿದವರನ್ನ ಬಂಧಿಸಿದ್ದ ಪೊಲೀಸರು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 399 ಮತ್ತು 402 ರ ಅಡಿಯಲ್ಲಿ ಕೇಸ್ ದಾಖಲಿಸಿದ್ದರು. ಆನಂತರ ಅಂದಿನ ತನಿಖಾಧಿಕಾರಿ ಎಎಸ್ಐ ಹುಚ್ಚಪ್ಪ ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ್ದರು. ಕೋರ್ಟ್ನಲ್ಲಿ ಪ್ರಕರಣದ ಪರವಾಗಿ ಸರ್ಕಾರಿ ಅಭಿಯೋಜಕಿ ರತ್ನಮ್ಮ ಪಿ ವಾದ ಮಂಡಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ನಿನ್ನೆ ದಿನ ಅಂದರೆ, 03-01-2026 ರಂದು ತೀರ್ಪು ನೀಡಿದ್ದಾರೆ. ಶಿವಮೊಗ್ಗದ ಟಿಪ್ಪು ನಗರದ ಇಮ್ರಾನ್ ಷರೀಫ್ (33), ಹನೀಫುಲ್ಲಾ ಖಾನ್ (22) ಹಾಗೂ ಕಡೇಕಲ್ಲಿನ ಅಬೀದ್ ಖಾನ್ (35), ಮುಜಾಹಿದ್ (40) ಮತ್ತು ನಸ್ರುಲ್ಲಾ (29) ಗೆ ಶಿಕ್ಷೆ ವಿಧಿಸಿದ್ದಾರೆ.

ಭದ್ರಾವತಿ ಕೋರ್ಟ್ ತೀರ್ಪಲ್ಲಿ ಏನಿದೆ/Bhadravati Robbery Conspiracy Case Five
ಐಪಿಸಿ ಕಲಂ 399 ರ ಅಡಿಯಲ್ಲಿ 10 ವರ್ಷ ಕಠಿಣ ಸಜೆ ಮತ್ತು ತಲಾ 50,000 ರೂಪಾಯಿ ದಂಡ, ದಂಡ ಪಾವತಿಸಲು ತಪ್ಪಿದ್ದಲ್ಲಿ 5 ತಿಂಗಳು ಸಾದಾ ಸೆರೆವಾಸ ವಿಧಿಸಿದೆ. ಹಾಗೆಯೇ ಐಪಿಸಿ ಕಲಂ 402 ರ ಅಡಿಯಲ್ಲಿ 7 ವರ್ಷ ಕಠಿಣ ಸಜೆ ಮತ್ತು ತಲಾ 30,000 ರೂಪಾಯಿ ದಂಡ ವಿಧಿಸಲಾಗಿದ್ದು, ದಂಡ ಪಾವತಿಸಲು ವಿಫಲರಾದರೆ 3 ತಿಂಗಳು ಸಾದಾ ಸಜೆ ಅನುಭವಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಿದೆ.
ಸೂಚನೆ : ಕೋರ್ಟ್ ತೀರ್ಪಿಗೆ ಸಂಬಂಧಿಸಿದಂತೆ ಪೊಲೀಸ್ ಪ್ರಕಟಣೆಯ ಸುದ್ದಿ ಇದಾಗಿದೆ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.

ಭದ್ರಾವತಿ ದರೋಡೆ ಸಂಚು ಪ್ರಕರಣ:ಕಡೆಕಲ್ ಅಬೀದ್ ಸೇರಿ ಐವರು ಅಪರಾಧಿಗಳಿಗೆ 10 ವರ್ಷ ಕಠಿಣ ಸಜೆ Bhadravati Robbery Conspiracy Case Five Convicted to 10 Years Rigorous
