SHIVAMOGGA| MALENADUTODAY NEWS | ಮಲೆನಾಡು ಟುಡೆ Apr 4, 2025
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ಇಬ್ಬರು ಸರ್ಕಾರಿ ಅಧಿಕಾರಿಗಳು ಲೋಕಾಯುಕ್ತ ಟ್ರ್ಯಾಪ್ ಆಗಿದ್ದಾರೆ. ತಾಲೂಕಿನ ಕಂಬದಾಳು ಹೊಸೂರು ಪಿಡಿಒ ಮತ್ತು ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಖಾಲಿ ಜಾಗಕ್ಕೆ ಚೆಕ್ ಬಂದಿ ನಿಗದಿಪಡಿಸಿ, ಇ ಸ್ವತ್ತು ಮಾಡಿಕೊಡಲು ಲಂಚ ಕೇಳಿದ್ದ ಸಂದರ್ಭದಲ್ಲಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಸಂತ್ರಸ್ತರೊಬ್ಬರು ಈ ಸಂಬಂಧ ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರು ದಾಖಲಿಸಿ ದಾಳಿಗೆ ಪ್ಲಾನ್ ಮಾಡಿದ ಲೋಕಾಯುಕ್ತ ಪೊಲೀಸರು ಅಧಿಕಾರಿಗಳಾದ ಸುರೇಶಸ್ ಹಾಗೂ ಮಹಮದ್ ಅಲಿ 15 ಸಾವಿರ ಲಂಚ ಪಡೆಯುತ್ತಿದ್ದಾಗ ಇಬ್ಬರನ್ನು ಟ್ರ್ಯಾಪ್ ಮಾಡಿದ್ದಾರೆ.