KARNATAKA NEWS/ ONLINE / Malenadu today/ Oct 9, 2023 SHIVAMOGGA NEWS
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಗಾಂಧಿನಗರ ಸರ್ಕಲ್ನಲ್ಲಿ ಅಪಘಾತವೊಂದು ಸಂಭವಿಸಿದೆ. ನಿಂತಿದ್ದ KSRTC ಬಸ್ಗೆ ಬೈಕ್ವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಗಾಯಗೊಂಡಿದ್ದಾರೆ.
ನಗರದ ಗಾಂಧಿನಗರ ಸರ್ಕಲ್ ನಲ್ಲಿ ನಿಂತಿದ್ದ ಕೆಎಸ್ಆರ್ಟಿಸಿ ಬಸ್ಗೆ ವೇಗದಿಂದ ಬಂದ ಬೈಕ್ವೊಂದು ಗುದ್ದಿದೆ. ಗುದ್ದಿದ ರಭಸಕ್ಕೆ ಬೈಕ್ನ ಮುಂಭಾಗ ನುಜ್ಜುಗುಜ್ಜಾಗಿದೆ. ಘಟನೆಯಲ್ಲಿ ಮೂವರಿಗೆ ಗಾಯವಾಗಿದೆ ಎಂದು ಪ್ರಾಥಮಿಕವಾಗಿ ಮಾಹಿತಿ ತಿಳಿದು ಬಂದಿದೆ. ಘಟನೆ ಬೆನ್ನಲ್ಲೆ ಪೊಲೀಸರು ಸ್ತಳಕ್ಕೆ ಆಗಮಿಸಿ ಬೈಕ್ ತೆರವುಗೊಳಿಸಿದ್ಧಾರೆ.
ಇನ್ನಷ್ಟು ಸುದ್ದಿಗಳು
