ಶ್ರೀಮಂತರ ಆಶ್ರಯ ತಾಣ ಬಿಜೆಪಿ | ಹಪ್ತ ವಸೂಲಿ ಸರ್ಕಾರ | ಮೋದಿ ಸರ್ಕಾರದ ವಿರುದ್ಧ ಕಿಡಿ

BJP is the haven of rich people hafta recovery government | Spark against Modi Govt

ಶ್ರೀಮಂತರ ಆಶ್ರಯ ತಾಣ ಬಿಜೆಪಿ | ಹಪ್ತ ವಸೂಲಿ ಸರ್ಕಾರ | ಮೋದಿ ಸರ್ಕಾರದ ವಿರುದ್ಧ ಕಿಡಿ

SHIVAMOGGA | MALENADUTODAY NEWS |  Apr 20, 2024  

 

ಕಾಂಗ್ರೆಸ್ ಮುಖಂಡ ಮಾಜಿ ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮೋದಿ ಸರ್ಕಾರದ ಅವಧಿಯಲ್ಲಿ ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ. ಬಡವರು ಬಡವರಾಗಿಯೇ ಉಳಿಯುತ್ತಿದ್ದಾರೆ. ಬಡವರ ಬದುಕಿಗೆ ಬೆಲೆ ಸಿಗುತ್ತಿಲ್ಲ. ಆ ಪಕ್ಷ ಶ್ರೀಮಂತರ ಆಶ್ರಯತಾಣವಾಗಿದೆ ಎಂದು ಆರೋಪಿಸಿದ್ದಾರೆ. 

ಚುನಾವಣಾ ಬಾಂಡ್ ಜಗತ್ತಿನ ದೊಡ್ಡ ಹಗರಣ ಎಂದ ಅವರು ಬಿಜೆಪಿ ಕೇಂದ್ರದ ಐಟಿ,ಇಡಿ,ಸಿಬಿಐನಂತಹ ಸಂವಿಧಾನಿಕ ಸಂಸ್ಥೆಗಳನ್ನ ದುರ್ಬಳಕೆ ಮಾಡಿಕೊಂಡು  ಹಪ್ತಾವಸೂಲಿ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಸಂವಿಧಾನ ಬದಲಾವಣೆ ಮಾಡುವುದಿಲ್ಲ ಎಂದು ಮೋದಿ ಹೇಳುತ್ತಿದ್ದಾರೆ. ಆದರೆ ಅವರದ್ದೇ ಪಕ್ಷದ ಅಭ್ಯರ್ಥಿಯೊಬ್ಬರು ಬಿಜೆಪಿಗೆ ಬಹುಮತ ಬಂದಲ್ಲಿ ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳುತ್ತಾರೆ. ಅಂತಹವರ  ವಿರುದ್ರ ಬಿಜೆಪಿ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ರು.