Sunday, 10 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಶಿವಮೊಗ್ಗದಲ್ಲಿ ಬಿಜೆಪಿ ರೈತ ಮೋರ್ಚಾದ ಪ್ರತಿಭಟನೆ  : ಯಾರೆಲ್ಲಾ ಏನೆಲ್ಲಾ ಹೇಳಿದ್ರು

prathapa thirthahalli
Last updated: August 1, 2025 2:32 pm
Prathapa thirthahalli - content producer
Share
SHARE

Bjp protest against congress :  ಶಿವಮೊಗ್ಗದಲ್ಲಿ ಬಿಜೆಪಿ ರೈತ ಮೋರ್ಚಾದ ಪ್ರತಿಭಟನೆ  : ಯಾರಲ್ಲಾ ಏನೆಲ್ಲಾ ಹೇಳಿದ್ರು

ಶಿವಮೊಗ್ಗ: ಯೂರಿಯಾ ರಸಗೊಬ್ಬರದ ಕೊರತೆ ಮತ್ತು ರೈತರ ಸಾಗುವಳಿ ಭೂಮಿ ಒತ್ತುವರಿ ತೆರವು ಮಾಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಶಿವಮೊಗ್ಗದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಗೋಪಿ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಕಾರ್ಯಕರ್ತರು, ಫಲಕಗಳನ್ನು ಹಿಡಿದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಶಾಸಕ ಆರಗ ಜ್ಞಾನೇಂದ್ರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಟ್ರ್ಯಾಕ್ಟರ್‌ನಲ್ಲಿ ರ್ಯಾಲಿ ಮೂಲಕ ಪ್ರತಿಭಟನೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎನ್. ಚೆನ್ನಬಸಪ್ಪ, ಧನಂಜಯ ಸರ್ಜಿ, ಡಿ.ಎಸ್. ಅರುಣ್, ಕೆ.ಬಿ. ಅಶೋಕ್ ನಾಯ್ಕ್ ಮತ್ತು ಜಿಲ್ಲಾಧ್ಯಕ್ಷ ಜಗದೀಶ್ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

Bjp protest against congress :  ಇದು ಕೇವಲ ಟ್ರಯಲ್, ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ: ಬಿ.ವೈ. ರಾಘವೇಂದ್ರ

ಪ್ರತಿಭಟನೆಯಲ್ಲಿ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, “ಭ್ರಷ್ಟ ಮತ್ತು ರೈತ ವಿರೋಧಿ ಸರ್ಕಾರದ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ಲಿಂಗನಮಕ್ಕಿ ಜಲಾಶಯ ನಿರ್ಮಾಣದಿಂದ ಅನೇಕ ರೈತರು ಬೀದಿಗೆ ಬಂದಿದ್ದಾರೆ. ಈಗ ರೈತ ವಿರೋಧಿ ಕಾಂಗ್ರೆಸ್ ಸರ್ಕಾರ 35 ಸಾವಿರ ರೈತರಿಗೆ ನೋಟಿಸ್ ನೀಡಿದೆ. ಮೂರು ಎಕರೆಗಿಂತ ಕಡಿಮೆ ಇರುವ ರೈತರ ಒತ್ತುವರಿ ಜಮೀನುಗಳನ್ನು ತೆರವು ಮಾಡಬಾರದು. ಅಡಿಕೆ ತೋಟಗಳನ್ನು ಕತ್ತರಿಸಿ ರೈತರನ್ನು ಒಕ್ಕಲೆಬ್ಬಿಸುವ ದ್ವೇಷದ ರಾಜಕಾರಣ ನಡೆಯುತ್ತಿದೆ. ಇವತ್ತಿನ ಹೋರಾಟ ಕೇವಲ ಟ್ರಯಲ್. ಮುಂದಿನ ದಿನಗಳಲ್ಲಿ ಲಕ್ಷಾಂತರ ಜನರೊಂದಿಗೆ ದೊಡ್ಡ ಹೋರಾಟ ಮಾಡುತ್ತೇವೆ. ಗ್ಯಾರಂಟಿಗಳ ಹೆಸರಿನಲ್ಲಿ ಸರ್ಕಾರ ಜನರಿಗೆ ಮೋಸ ಮಾಡಿದೆ” ಎಂದು ಆರೋಪಿಸಿದರು.

Bjp protest against congress :  ಉಸ್ತುವಾರಿ ಸಚಿವರ ನೇರ ಆದೇಶದಂತೆ ತೆರವು ಕಾರ್ಯ: ಹರತಾಳು ಹಾಲಪ್ಪ

ಮಾಜಿ ಸಚಿವ ಹರತಾಳು ಹಾಲಪ್ಪ ಮಾತನಾಡಿ, “ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ನೇರ ಆದೇಶದ ಮೇರೆಗೆ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಆಗುತ್ತಿದೆ. ರಾಜ್ಯ ಸರ್ಕಾರ ಬಂದ ನಂತರ ರೈತರ ಮೇಲೆ ದಬ್ಬಾಳಿಕೆ ಹೆಚ್ಚಾಗಿದೆ. ಆದರೆ, ಉಸ್ತುವಾರಿ ಸಚಿವರು ಈ ಕುರಿತು ಪ್ರಶ್ನಿಸಿದಾಗ ಉಡಾಫೆಯಾಗಿ ಮಾತನಾಡುತ್ತಾರೆ” ಎಂದು ಆರೋಪಿಸಿದರು.

ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಈ ಹೋರಾಟವನ್ನು ನಡೆಸುವುದಾಗಿ ಹಾಲಪ್ಪ ತಿಳಿಸಿದರು. ಈ ರೀತಿಯ ಹೋರಾಟಗಳಿಂದಲೇ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದರು. ವಿಜಯೇಂದ್ರ ಮತ್ತು ರಾಘವೇಂದ್ರ ಅವರಿಗೂ ಆ ಅವಕಾಶ ಇದೆ. ಮಧು ಬಂಗಾರಪ್ಪ ಅವರು ತಮ್ಮ ತಂದೆಯ ಹೆಸರನ್ನು ಹೇಳಿಕೊಂಡು ಆಡಳಿತ ನಡೆಸುವುದನ್ನು ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು” ಎಂದರು. ಅವರು ತುಮರಿ ಭಾಗದ 43 ಶಾಲೆಗಳನ್ನು ಮುಚ್ಚಿಸಿದ್ದಾರೆ ಮತ್ತು ಆನಂದಪುರದಲ್ಲಿ ಆಂಬುಲೆನ್ಸ್ ಇಲ್ಲದೆ ಜನ ಪರದಾಡುತ್ತಿದ್ದಾರೆ ಎಂದು ದೂರಿದರು.

Bjp protest against congress
Bjp protest against congress
TAGGED:bjp protest against congress
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article Malegaon Blast Case ಮಾಲೆಗಾಂವ್ ಸ್ಫೋಟ ಪ್ರಕರಣ: ಹಿಂದೂಗಳಿಗೆ ಕಳಂಕ ಹಚ್ಚುವ ಪ್ರಯತ್ನ ವಿಫಲವಾಗಿದೆ : ಆರಗ ಜ್ಞಾನೇಂದ್ರ
Next Article Prajwal revanna ಅತ್ಯಾಚಾರ ಪ್ರಕರಣ : ಪ್ರಜ್ವಲ್​ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟ
Leave a Comment

Leave a Reply Cancel reply

Your email address will not be published. Required fields are marked *

You Might Also Like

shikaripura car accident
SHIVAMOGGA NEWS TODAYSHIKARIPURA

shikaripura car accident : ಜುಲೈ 02 ಚಲಿಸುತ್ತಿದ್ದ ಕಾರಿನ ಟಯರ್ ಬ್ಲಾಸ್ಟ್, ಓರ್ವನಿಗೆ ಗಂಭೀರ ಗಾಯ

By Prathapa thirthahalli

ಸಹ್ಯಾದ್ರಿ ಉತ್ಸವದಲ್ಲಿ ಗಮನ ಸೆಳೆದ ಮಲೆನಾಡ ಹಾಳೆ ಟೊಪ್ಪಿ 

By 131
SHIVAMOGGA NEWS TODAY

ಮೂಳೆ ಇಲ್ಲದ ಮಾನವ ರೈತನಿಲ್ಲದ ದೇಶ ಎರಡು ಒಂದೆ | ಥಾವರ್‌ ಚಂದ್‌ ಗೆಹ್ಲೋಟ್

By 131
SHIVAMOGGA NEWS TODAY

ಮಾರ್ಚ್‌ 23 ರಂದು ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up