ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 1 2025: ಸಿದ್ದರಾಮಯ್ಯರ ಸರ್ಕಾರದಲ್ಲಿ ಮತ್ತೆ ಸಂಪುಟ ಪುನರಚನೆಯ ಮಾತುಗಳು ಕೇಳಿಬರುತ್ತಿದೆ. ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಸದ್ಯದಲ್ಲೆ ನಡೆಯಲಿದೆ ಎಂಬ ದೆಹಲಿ ವರ್ತಮಾನಗಳು ಕಾಂಗ್ರೆಸ್ ಪಕ್ಷದಲ್ಲಿಯೇ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಮಧ್ಯೆ ಶಿವಮೊಗ್ಗದ ವಿಚಾರದಲ್ಲಿ ಭದ್ರಾವತಿ ಶಾಸಕ ಬಿಕೆ ಸಂಗಮೇಶ್ಗೆ ಮಂತ್ರಿಗಿರಿ ಸಿಗಲಿದೆ ಎಂಬ ಮಾತುಗಳು ಕೇಳಿಬಂದಿದೆ.

ಸದ್ಯ ನಡೆಯುತ್ತಿರುವ ಚರ್ಚೆಯ ಪ್ರಕಾರ, ಹಾಲಿ ಸಂಪುಟದಲ್ಲಿರುವ ಹದಿನೈದಕ್ಕೂ ಹೆಚ್ಚು ಮಂತ್ರಿಗಳು ಪಕ್ಷದ ಕೆಲಸಕ್ಕೆ ನಿಯೋಜಿತರಾಗಿ,ಅಷ್ಟೇ ಮಂದಿ ಶಾಸಕರು ಮಂತ್ರಿಗಳಾಗಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹಿರಿಯ ಪತ್ರಕರ್ತರು ಆರ್ ಟಿ ವಿಠಲಮೂರ್ತಿಯವರು ತಮ್ಮ ಸೋಶಿಯಲ್ ಮೀಡಿಯಾ ಫೇಸ್ಬುಕ್ ಅಕೌಂಟ್ನಲ್ಲಿ ಸುದೀರ್ಘ ಆರ್ಟಿಕಲ್ವೊಂದನ್ನ ಬರೆದಿದ್ದಾರೆ. ಅವರು ಬರೆದಿರುವ ಪ್ರಕಾರ, ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಶಾಸಕ ಬಿ.ಕೆ.ಸಂಗಮೇಶ್ (BK Sangamesh ) ಈ ಬಾರಿ ಮಂತ್ರಿಯಾಗುವುದು ಬಹುತೇಕ ನಿಚ್ವಳ.ನಾಲ್ಕು ಬಾರಿ ಶಾಸಕರಾದರೂ ಒಂದಿಲ್ಲೊಂದು ಕಾರಣದಿಂದ ಸಂಗಮೇಶ್ ಅವಕಾಶ ಕಳೆದುಕೊಳ್ಳುತ್ತಾ ಬಂದಿದ್ದರು.ಆದರೆ ಈ ಸಲ ಅವರಿಗೆ ಹಲವು ಅಂಶಗಳು ಪ್ಲಸ್ ಆಗಿರುವುದರಿಂದ ಮಂತ್ರಿಯಾಗುವ ಅವಕಾಶ ಹೆಚ್ಚು ಎಂದು ವಿವರಿಸಿದ್ದಾರೆ.
ಆರ್ಟಿ ವಿಠಲಮೂರ್ತಿಯವರ ಪೂರ್ತಿ ಲೇಖನ ಓದುವುದಕ್ಕೆ ಇಲ್ಲಿ ಕ್ಲಿಕ್ ಮಾಡಿ : facebook

ಇದನ್ನು ಸಹ ಓದಿ : ಮಧ್ಯರಾತ್ರಿ ರೂಮಿನೊಳಗೆ ಬಂದು ಮೈಕೈ ಮುಟ್ಟಿದ ಫ್ರಾಕ್ ಧರಿಸಿದ್ದ ಆಗಂತುಕ!
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ