BREAKING / ಶರಾವತಿ ಮು.ಳುಗಡೆ ಸಂತ್ರಸ್ತರಿಗೆ ರಿಲೀಫ್ ಕೊಟ್ಟ ಹೈಕೋರ್ಟ್
BREAKING/ HC grants relief to Sharavathi victims
KARNATAKA NEWS/ ONLINE / Malenadu today/ Apr 26, 2023 GOOGLE NEWS
ಸಾಗರ/ಶಿವಮೊಗ್ಗ ಶರಾವತಿ ಹಿನ್ನೀರ ಮುಳುಗಡೆ ಸಂತ್ರಸ್ತರನ್ನು ಒಕ್ಕಲೆಬ್ಬಿಸಿದಂತೆ, ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದಾಗಿ 305 ಸಂತ್ರಸ್ತ ರೈತರು ನಿಟ್ಟುಸಿರು ಬಿಡುವಂತಾಗಿದೆ. ಮಧ್ಯಂತರ ತಡೆಯಾಜ್ಞೆ ಇದಾಗಿದ್ದು, ಹೈಕೋರ್ಟ್ನಲ್ಲಿ ಈ ಸಂಬಂಧ ವಿಚಾರಣೆ ಮುಂದುವರಿಯಲಿದೆ.
ಏನಿದು ಪ್ರಕರಣ
ಈ ವಿಚಾರವಾಗಿ ಸುದ್ದಿಗೋಷ್ಟಿಯೊಂದರಲ್ಲಿ ಸಿಗಂದೂರು ಚೌಡೇಶ್ವರಿ ದೇವಸ್ಥಾನದ (siganduru sri chowdeshwari temple) ಧರ್ಮದರ್ಶಿ ಡಾ.ರಾಮಪ್ಪ ಸರ್ಕಾರದ ಡಿನೋಟಿಫಿಕೇಶನ್ ರದ್ದತಿ ಆದೇಶವನ್ನು ಪ್ರಶ್ನಿಸಿ 305 ರೈತ ಕುಟುಂಬಗಳು ಹೈಕೋರ್ಟ್ ಮೆಟ್ಟಿಲೇರಿದ್ದವು. ಇದೀಗ ಕೋರ್ಟ್ ರೈತರಿಗೆ ತೊಂದರೆ ಕೊಡದಂತೆ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸೂಚಿಸಿದೆ ಎಂದರು.
ಓದಿ / ಶಿವಮೊಗ್ಗದ ರಸ್ತೆಗಳಲ್ಲಿ ಯುವಕನ ಬೈಕ್ ಸ್ಟಂಟ್/ ಸೈಲೆಂಟ್ ಆಗಿ ಪುಂಡರಿಗೆ ವಾರ್ನಿಂಗ್ ಕೊಟ್ಟ ಪೊಲೀಸ್
ಸಮಸ್ಯೆ ಏನಾಗಿತ್ತು
ಶರಾವತಿ ಸಂತ್ರಸ್ತರಿಗೆ ಶಿವಮೊಗ್ಗ ಜಿಲ್ಲೆಯ ಬೇರೆಬೇರೆ ಭಾಗಗಳಲ್ಲಿ ಜಮೀನು ನೀಡಲಾಗಿದೆ. ಆದರೆ, ಈ ಭೂಮಿಯ ಹಕ್ಕನ್ನು ಸಂತ್ರಸ್ತರ ಹೆಸರಿಗೆ ಮಾಡಿಕೊಡಲಿಲ್ಲ. ಇದರಿಂದಾಗಿ ಒಂದಿಲ್ಲ ಒಂದು ಸಮಸ್ಯೆ ಎದುರಾಗುತ್ತಲೆ ಬಂದಿದೆ.
ಓದಿ / ಶಿವಮೊಗ್ಗದಲ್ಲಿ ಬಸ್ ಹತ್ತಿದ ಎಸ್ಪಿ ಮಿಥುನ್ ಕುಮಾರ್, ಡಿಸಿ ಡಾ.ಆರ್ ಸೆಲ್ವಮಣಿ! ವಿವರ ಇಲ್ಲಿದೆ
ಡಿನೋಟಿಫಿಕೇಶನ್ ರದ್ದು ಮಾಡಿದ್ದ ಸರ್ಕಾರ
ಈ ಮಧ್ಯೆ ಸರ್ಕಾರ ಇತ್ತೀಚೆಗೆ ಶರಾವತಿ ಸಂತಸ್ತ್ರರಿಗೆ ನೀಡಿರುವ ಭೂಮಿಯ ಡಿನೋಟಿಫಿಕೇಶನ್ ಆದೇಶವನ್ನು ರದ್ದುಗೊಳಿಸಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಿತ್ತು. ರಾಜ್ಯಪತ್ರದಲ್ಲಿ ಭೂಮಿ ಮಂಜೂರು ಮಾಡಿದ ಪ್ರಕ್ರಿಯೆ ಕಾನೂನು ಬಾಹಿರ ಎಂದು ತಿಳಿಸಿತ್ತು.
ಓದಿ / ಡಿಪ್ಲೋಮೋ ಕೋರ್ಸ್ಗೆ ಅರ್ಜಿ ಆಹ್ವಾನ/ ತರಬೇತಿ ಬಳಿಕ 100 % ಉದ್ಯೋಗಾವಕಾಶ/ ವಿವರ ಇಲ್ಲಿದೆ
ಹೈಕೋರ್ಟ್ ಮೆಟ್ಟಿಲೇರಿದ್ದ ಸಂತ್ರಸ್ತರು
ಇದನ್ನ ಪ್ರಶ್ನಿಸಿ 305 ರೈತರು ರಾಮಪ್ಪರವರ ನೇತ್ರತ್ವದಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು, ಇದೀಗ ಸಂತ್ರಸ್ತರ ಅಹವಾಲಿನಂತೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಇದರಿಂದಾಗಿ ಸಂತ್ರಸ್ತರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.
ಓದಿ / ಡಿಪ್ಲೋಮೋ ಕೋರ್ಸ್ಗೆ ಅರ್ಜಿ ಆಹ್ವಾನ/ ತರಬೇತಿ ಬಳಿಕ 100 % ಉದ್ಯೋಗಾವಕಾಶ/ ವಿವರ ಇಲ್ಲಿದೆ
Malenadutoday.com Social media