BREAKING NEWS / ಎನ್ಐಎ ನಿಂದ ಶಿವಮೊಗ್ಗದಲ್ಲಿ ಮತ್ತೊಬ್ಬ ಶಂಕಿತನ ವಿಚಾರಣೆ ಪ್ರಕರಣ ಯಾವುದು? ಇಲ್ಲಿದೆ ಸ್ಟೋರಿ
ಈ ಯುವಕ ಇಂಜಿನಿಯರಿಂಗ್ ವಿದ್ಯಾರ್ಥಿ ಎಂಬುವ ಮಾಹಿತಿ ಲಭ್ಯವಾಗಿದ್ದು, ಪ್ರಕರಣ ಸಂಬಂಧ ಮಾಹಿತಿಯನ್ನು ಗೌಪ್ಯವಾಗಿ ಇರಿಸಲಾಗಿದೆ. ಯುವಕನ್ನನ್ನು ಗೌಪ್ಯ ಕಾರ್ಯಾಚರಣೆಯಲ್ಲಿ ವಿಚಾರಣೆ ನಡೆಸಲಾಗಿದೆ
ಶಂಕಿತ ಚಟುವಟಿಕೆಗಳ ವಿಚಾರದಲ್ಲಿ ಶಿವಮೊಗ್ಗ ಇತ್ತೀಚೆಗೆ ತುಸು ತಣ್ಣಗಾಗಿತ್ತು. ಹೀಗಿರುವಾಗಲೇ ಶಿವಮೊಗ್ಗ ನಗರದಲ್ಲಿ ಮತ್ತೊಬ್ಬ ಯುವಕನನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿತ್ತು.
ಈ ಮಧ್ಯೆ ಸುದ್ದಿಯ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಿದ್ದು, ಸಿಕ್ಕಿರುವ ಮಾಹಿತಿಯ ಪ್ರಕಾರ, ಎನ್ಇಎ ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಬಂದಿದ್ದು, ಯುವಕನನ್ನು ಎರಡು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ಧಾರೆ. ಎರಡು ಗಂಟೆಗಳ ವಿಚಾರಣೆ ನಡೆಸಿ ಅಲ್ಲಿಂದ ತೆರಳಿದ್ಧಾರೆ.
BREAKING NEWS/ ಮತ್ತೊಂದು ಜಲ ದುರಂತ/ ಅಬ್ಬೆ ಪಾಲ್ಸ್ನಲ್ಲಿ ಈಜಲು ಹೋಗಿ ತೀರ್ಥಹಳ್ಳಿ ಯುವಕ ಸಾವು
ಇದು ಶಿವಮೊಗ್ಗ ಪೊಲೀಸರ ಕಾರ್ಯಾಚರಣೆಯಲ್ಲ, ಬದಲಾಗಿ ಶಿವಮೊಗ್ಗಕ್ಕೆ ಬಂದಿರುವ ಎನ್ಇಎ ತನಿಖಾ ತಂಡ ನಡೆಸಿರುವ ಕಾರ್ಯಾಚರಣೆಯಾಗಿದೆ. ಶಿವಮೊಗ್ಗ ಪ್ರಮುಖ ಬಡಾವಣೆಯೊಂದರ ನಿವಾಸಿಯಾದ ಯುವಕನನ್ನ ಎನ್ಇಎ ತಂಡ ವಿಚಾರಣೆಗೆ ಒಳಪಡಿಸಿದೆ.
SADNEWS/ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಭೀಕರ ಅಪಘಾತ/ ಸಂತೆಗೆ ಹೋಗಿ ಬರ್ತಿದ್ದ ಇಬ್ಬರ ದುರ್ಮರಣ
ಈ ಯುವಕ ಇಂಜಿನಿಯರಿಂಗ್ ವಿದ್ಯಾರ್ಥಿ ಎಂಬುವ ಮಾಹಿತಿ ಲಭ್ಯವಾಗಿದ್ದು, ಪ್ರಕರಣ ಸಂಬಂಧ ಮಾಹಿತಿಯನ್ನು ಗೌಪ್ಯವಾಗಿ ಇರಿಸಲಾಗಿದೆ. ಇನ್ನೂ ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ನ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತಂಡ ಮಂಗಳೂರಿನಲ್ಲಿಯು ಕಾರ್ಯಾಚರಣೆ ನಡೆಸಿದೆ.
ಸೂಚನೆ: ಈ ಪ್ರಕರಣದ ಸುದ್ದಿ ಲಭ್ಯವಾದ ಸಂದರ್ಭದಲ್ಲಿ ಯುವಕನನ್ನು ವಶಕ್ಕೆ ಪಡೆಯಲಾಗಿತ್ತು ಎಂದು ವರದಿಯಾಗಿತ್ತು, ಇದೀಗ ಸುದ್ದಿಯ ಅಪ್ಡೇಟ್ ದೊರೆತಿದ್ದು, ಯುವಕನನ್ನು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು, ಆ ನಂತರ ಅಲ್ಲಿಂದ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟಾರೆ ಎನ್ ಐಎ ತಂಡ ಶಿವಮೊಗ್ಗಕ್ಕೆ ಬಂದಿದ್ದು, ಈ ಬಗ್ಗೆ ಅಧಿಕೃತವಾದ ಮಾಹಿತಿ ಇನ್ನಷ್ಟೆ ಪೂರ್ಣವಾಗಿ ಸಿಗಬೇಕಿದೆ.