ನವೆಂಬರ್ 10 2025 ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗದಲ್ಲಿ ಮಹಿಳೆಯರ ಭೀಕರ ಹತ್ಯೆ: ಮಾರಕಾಸ್ತ್ರಗಳಿಂದ ಹೊಡೆದು ಮಹಿಳೆಯ ಕೊಲೆ, ದುಮ್ಮಳ್ಳಿ ಸಿದ್ದೇಶ್ವರ ನಗರದಲ್ಲಿ ಘಟನೆ; ಹಳೆಯ ದ್ವೇಷವೇ ಕೊಲೆಗೆ ಕಾರಣವೆಂದು ಶಂಕೆ: ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಸೋದರನಿಂದ ಸಹೋದರನ ಹತ್ಯೆ! ನಡೆದಿದ್ದೇನು? ತುಂಗಾನಗರದ ಕಂಪ್ಲೀಟ್ ಸ್ಟೋರಿ
ಶಿವಮೊಗ್ಗ ನಗರದ ಹೊರವಲಯದಲ್ಲಿರುವ ದುಮ್ಮಳ್ಳಿ ಗ್ರಾಮದ ಸಿದ್ದೇಶ್ವರ ನಗರದಲ್ಲಿ ಕೊಲೆಯೊಂದು ನಡೆದಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಮಹಿಳೆಯೊಬ್ಬರನ್ನು ಹತ್ಯೆ ಮಾಡಿದ್ದಾರೆ. ಹಳೆಯ ದ್ವೇಷದ ಕಾರಣದಿಂದಲೇ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ.
ಶಿವಮೊಗ್ಗ : ಗಾಂಧಿ ಪಾರ್ಕ್ನಲ್ಲಿನ ಮಕ್ಕಳ ರೈಲಿನ ಇಂಜಿನ್ನಲ್ಲಿ ಸಮಸ್ಯೆ! ದಟ್ಟ ಹೊಗೆ!
ಗಂಗಮ್ಮ (45) ಕೊಲೆಯಾದ ದುರ್ದೈವಿ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ತುಂಗಾನಗರ ಠಾಣೆಯ ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ ಪ್ರಕರಣದ ಸಂಬಂಧ ನಾಗೇಶ್ ನಾಯ್ಕ್ ಮತ್ತು ಹರೀಶ್ ಎಂಬ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಲ್ಲಿ ಇವಿ ಚಾರ್ಜಿಂಗ್ ಸ್ಟೇಷನ್ಗಳು ಎಲ್ಲೆಲ್ಲಿ ಇವೆ!?
ಹತ್ಯೆಗೀಡಾದ ಗಂಗಮ್ಮ ಅವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ/
ನಾಳೆ ಶಿವಮೊಗ್ಗದ ಪ್ರಮುಖ ಏರಿಯಾಗಳಲ್ಲಿ ಕರೆಂಟ್ ಇರಲ್ಲ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
