bus accident today : ಜೂನ್ 27 ಕೆಎಸ್ಆರ್ಟಿಸಿ ಬಸ್ ಹಾಗೂ ಪಿಕಪ್ ನಡುವೆ ಮುಖಾಮುಖಿ ಡಿಕ್ಕಿ | ಇಬ್ಬರಿಗೆ ಗಂಭೀರ ಗಾಯ
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಪಿಕಪ್ ವಾಹನದ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಪಿಕಪ್ ವಾಹನದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿಕ್ಕಮಗಳೂರಿನಿಂದ ಸೆಂಟ್ರಿಂಗ್ ವಸ್ತುಗಳನ್ನು ತುಂಬಿಕೊಂಡು ಮೂಡಿಗೆರೆ ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನಕ್ಕೆ ಧರ್ಮಸ್ಥಳದಿಂದ ಹೊಸದುರ್ಗಕ್ಕೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಪಿಕಪ್ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.
ಪಿಕಪ್ ವಾಹನದಲ್ಲಿದ್ದ ಕುರುವಂಗಿ ಗ್ರಾಮದ ಶರಣ್ ಮತ್ತು ಆದಿ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

