ಮಾಸ್ತಿಕಟ್ಟೆ ಬಳಿಯಲ್ಲಿ ಬೆಂಗಳೂರಿನಿಂದ ಕುಂದಾಪುರಕ್ಕೆ ಹೋಗುತ್ತಿದ್ದ ಬಸ್ ಅಪಘಾತ!

Bus on its way from Bengaluru to Kundapur met with an accident near Mastikatte.

ಮಾಸ್ತಿಕಟ್ಟೆ ಬಳಿಯಲ್ಲಿ ಬೆಂಗಳೂರಿನಿಂದ ಕುಂದಾಪುರಕ್ಕೆ ಹೋಗುತ್ತಿದ್ದ ಬಸ್ ಅಪಘಾತ!

KARNATAKA NEWS/ ONLINE / Malenadu today/ May 1, 2023 GOOGLE NEWS


ಹೊಸನಗರ ಶಿವಮೊಗ್ಗ/  ಇಲ್ಲಿನ ಮಾಸ್ತಿಕಟ್ಟೆ  ಬಳಿಯಲ್ಲಿ ನಿನ್ನೆ ಅಪಘಾತ ಸಂಭವಿಸಿದೆ. ಕುಂದಾಪುರ ಕ್ಕೆ ಹೋಗುತ್ತಿದ್ದ ಬಸ್​ವೊಂದು ಆಕ್ಸಿಡೆಂಟ್ ಆಗಿದ್ದು, ಘಟನೆಯಲ್ಲಿ 15 ಮಂದಿಗೆ ಗಾಯಗಳಾಗಿವೆ. 

ಇದನ್ನೂ ಓದಿ / ಒಂದೇ ದಿನ 90 ಲಕ್ಷದ ಎಣ್ಣೆ ಜಪ್ತಿ/ ಶಿಕಾರಿಪುರದಲ್ಲಿ ಭರ್ಜರಿ ಹಣ ಪತ್ತೆ/  ಒಂದೇ ರಾತ್ರಿ 19 ಪಿಟ್ಟಿಕೇಸ್/ ಎ.ಎ. ಸರ್ಕಲ್​ ನಲ್ಲಿ ರೂಟ್ ಮಾರ್ಚ್​! ಪೊಲೀಸ್ ನ್ಯೂಸ್​ 

ಹೇಗಾಯ್ತು ಅಪಘಾತ!

ಬೆಂಗಳೂರಿನಿಂದ ಕುಂದಾಪುರಕ್ಕೆ ದುರ್ಗಾಂಬಾ ಬಸ್ ತೆರಳುತ್ತಿತ್ತು. ಮಾಸ್ತಿಕಟ್ಟೆಯ ಬಳಿ ಸಿಗುವ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದ ಬಳಿ ಬಸ್​ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕಕ್ಕೆ ಮಗುಚಿ ಬಿದ್ದಿದೆ. 

ಇದನ್ನ ಓದಿ/ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಶಿವಮೊಗ್ಗ ಕೋರ್ಟ್​ ನೀಡಿತು ಭಾರೀ ಶಿಕ್ಷೆ 



ಘಟನೆಯಲ್ಲಿ  15 ಮಂದಿಗೆ ಗಾಯಗಳಾಗಿದ್ದು, ವಿಷಯ ತಿಳಿಯುತ್ತಲೇ ಸ್ಥಳೀಯರು ಸಹಾಯಕ್ಕಾಗಿ ದೌಡಾಯಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ 108 ಆ್ಯಂಬುಲೆನ್ಸ್​ (108 ambulance) ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದಿದೆ. ಆನಂತರ ಹೆಚ್ಚಿನ ಚಿಕಿತ್ಸೆಗೆ  ಉಡುಪಿ ಜಿಲ್ಲೆಯ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ  ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.  



Malenadutoday.com Social media