ಶೃಂಗೇರಿ ಹತ್ರ ಬಸ್ ಪಲ್ಟಿ! ಚಿತ್ರದುರ್ಗ ವಿದ್ಯಾರ್ಥಿಗಳಿಗೆ ಗಾಯ

ajjimane ganesh

ನವೆಂಬರ್, 09, 2025 ರ ಮಲೆನಾಡು ಟುಡೆ ಸುದ್ದಿ :  ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸಮೀಪವಿರುವ ಕಾವಡಿ ಗ್ರಾಮದ ಬಳಿ, ಟೂರಿಸ್ಟ್ ಬಸ್ ಒಂದು ಅಪ್​ಸೆಟ್ ಆಗಿದೆ. ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಬಸ್​ ಪಲ್ಟಿಯಾಗಿದೆ.ಪರಿಣಾಮ ಹನ್ನೊಂದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.  ಘಟನೆಯಲ್ಲಿ ಗಾಯಗೊಂಡಿರುವ ಒಟ್ಟು ಹನ್ನೊಂದು ವಿದ್ಯಾರ್ಥಿಗಳ ಪೈಕಿ ಕೆಲ ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನ ಮಣಿಪಾಲ್ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳೀಯರು ಮತ್ತು ಪೊಲೀಸರು ಧಾವಿಸಿ ಗಾಯಾಳುಗಳನ್ನು ರಕ್ಷಿಸಿದ್ದಾರೆ. 

chitradurga Students : Tourist Bus Overturns Near Sringeri, Chikkamagaluru 11 chitradurga Students Injured , Bus Overturns 11 chitradurga Students Injured
chitradurga Students : Tourist Bus Overturns Near Sringeri, Chikkamagaluru 11 chitradurga Students Injured ,

ಶಿವಮೊಗ್ಗ : ಗಾಂಧಿ ಪಾರ್ಕ್​ನಲ್ಲಿನ ಮಕ್ಕಳ ರೈಲಿನ ಇಂಜಿನ್​ನಲ್ಲಿ ಸಮಸ್ಯೆ! ದಟ್ಟ ಹೊಗೆ!

ಚಿತ್ರದುರ್ಗದ ವಾಸವಿ ಕಾಲೇಜಿನ ವಿದ್ಯಾರ್ಥಿಗಳು ಈ ಬಸ್​ನಲ್ಲಿ ಪ್ರವಾಸ ಕೈಗೊಂಡಿದ್ದರು. ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಸಂಬಂಧ  ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

chitradurga Students : Tourist Bus Overturns Near Sringeri, Chikkamagaluru 11 chitradurga Students Injured , Bus Overturns 11 chitradurga Students Injured
chitradurga Students : Tourist Bus Overturns Near Sringeri, Chikkamagaluru

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

chitradurga Students : Tourist Bus Overturns Near Sringeri, Chikkamagaluru

Share This Article