ಕಾಂಗ್ರೆಸ್ ಟಿಕೆಟ್ ಕದನ | ಯಾರು ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ?
Who is the candidate of the Congress South-West Graduate Constituency? ಕಾಂಗ್ರೆಸ್ ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಯಾರು ?
KARNATAKA NEWS/ ONLINE / Malenadu today/ Oct 31, 2023 SHIVAMOGGA NEWS
SHIVAMOGGA | ಶಿವಮೊಗ್ಗ ಜಿಲ್ಲಾ ರಾಜಕಾರಣ ಮತ್ತೊಂದು ಜಿದ್ದಾಜಿದ್ದಿಗೆ ಸಜ್ಜಾಗುತ್ತಿದೆ. ಅದರಲ್ಲಿಯು ವಿಶೇಷವಾಗಿ ಆಡಳಿತ ಪಕ್ಷದಿಂದ ಮೇಲ್ಮನೆಯ ಸ್ಥಾನಗಳಿಗೆ ಅಭ್ಯರ್ಥಿಗಳು ಯಾರು ಎಂಬುದೇ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ನಿಂದ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ದಿಸಲು ಟಿಕೆಟ್ ಆಕಾಂಕ್ಷಿಯಾಗಿ ರಮೇಶ್ ಶಂಕರಘಟ್ಟ ಅರ್ಜಿ ಸಲ್ಲಿಸಿದ್ದರು. ಆದರೆ ಕೆಪಿಸಿಸಿ ಈ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೊಡಗು ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಹೆಸರನ್ನು ಘೋಷಣೆ ಮಾಡಿದೆ.
ಆದರೆ ಕೆಪಿಸಿಸಿ ಇದುವರೆಗೂ ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯನ್ನು ಫೈನಲ್ ಮಾಡಿಲ್ಲ. ಹಾಗಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಈ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದೇ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
READ : ಮಧು ಬಂಗಾರಪ್ಪ V/s ಬೇಳೂರು ಗೋಪಾಲಕೃಷ್ಣ! ಏನು ನಡೆಯುತ್ತಿದೆ ಶಿವಮೊಗ್ಗ ಕಾಂಗ್ರೆಸ್ನಲ್ಲಿ?
ಒಂದು ಕಡೆ ಬಿಜೆಪಿಯಿಂದ ಜೆಡಿಎಸ್ಗೆ, ಜೆಡಿಎಸ್ನಿಂದ ಕಾಂಗ್ರೆಸ್ಗೆ ಬಂದಿರುವ ಆಯನೂರು ಮಂಜುನಾಥ್ ಮತ್ತೆ ನೈಋತ್ಯ ಪದವೀಧರ ಕ್ಷೇತ್ರದಿಂದ ಚುನಾವಣೆ ಎದುರಿಸುವ ಮಾತನಾಡ್ತಿದ್ದಾರೆ. ಅಲ್ಲದೆ ಈ ಸಂಬಂಧ ಪ್ರಬಲವಾಗಿ ಪ್ರಯತ್ನಿಸ್ತಿದ್ದಾರೆ. ಜೊತೆಯಲ್ಲಿ ಕಚೇರಿಯನ್ನು ಆರಂಭಿಸಿದ್ದಾರೆ.
ಆದರೆ,ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಚುನಾವಣೆಗೆ ನಿಂತು ಗೆಲ್ಲಲೇ ಬೇಕು ಎಂದು ಕಾಂಗ್ರೆಸ್ನ ಇನ್ನೊಬ್ಬ ಮುಖಂಡ ಎಸ್ಪಿ ದಿನೇಶ್ ಹಲವು ತಿಂಗಳಿನಿಂದ ಪ್ರಯತ್ನಿಸುತ್ತಿದ್ದಾರೆ. ಎರಡು ಬಾರಿ ಚುನಾವಣೆಗೆ ಸ್ಪರ್ಧಿಸಿ ಸೋಲು ಕಂಡಿರುವ ಎಸ್.ಪಿ.ದಿನೇಶ್ ಈ ಸಲ ಗೆಲುವಿನ ನಿರೀಕ್ಷೆಯಲ್ಲಿದ್ಧಾರೆ. ಮತದಾರರ ನೋಂದಣಿ ಕಾರ್ಯದಲ್ಲಿ ಸಕ್ರಿಯರಾಗಿರುವ ಅವರು, ಟಿಕೆಟ್ ಖಾತರಿಯಾಗುವುದನ್ನ ಕಾಯುತ್ತಿದ್ದಾರೆ.
ಸದ್ಯ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ನಲ್ಲಿ ಈ ಇಬ್ಬರು ಸಹ ನೈಋತ್ಯ ಪದವೀಧರ ಕ್ಷೇತ್ರದ ಟಿಕೆಟ್ಗಾಗಿ ಕಾಯುತ್ತಿದ್ದಾರೆ. ಇಬ್ಬರ ನಡುವೆ ಯಾರಿಗೆ ಅದೃಷ್ಟ ಒಲಿಯುತ್ತೋ ಗೊತ್ತಿಲ್ಲ. ಆದರೆ ಯಾರಿಗೆ ಟಿಕೆಟ್ ಸಿಕ್ಕರೂ ಅಸಮಾಧಾನ ಹೊಗೆಯಾಡುವುದಂತು ಸತ್ಯ ಎನ್ನಲಾಗ್ತಿದೆ