car accident : ಶಿವಮೊಗ್ಗ ತಾಲೂಕು ಸಮೀಪ ಸಕ್ರೆಬೈಲ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿದ್ದು ಚಾಲಕ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಶ್ರೀಧರ್ (55) ಮೃತಪಟ್ಟ ದುರ್ದೈವಿ.
ಶ್ರೀಧರ್ ಬೆಳಿಗ್ಗೆ ಕಾರನ್ನು ಚಲಾಯಿಸುತ್ತಿದ್ದಾಗ ಅವರ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿದೆ. ಗುದ್ದಿದ ರಬಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನುಜುಗುಜ್ಜಾಗಿದೆ. ಇದರಿಂದಾಗಿ ಶ್ರೀಧರ್ ಗಂಭೀರ ಗಾಯಗೊಂಡಿದ್ದು ಅವರನ್ನು ಕೂಡಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಸಹ ಅದಕ್ಕೂ ಮೊದಲೇ ಶ್ರೀಧರ್ ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ
