ಭದ್ರಾವತಿ ಹೆಚ್.ಕೆ.ಜಂಕ್ಷನ್ ಬಳಿ ಮರಕ್ಕೆ ಕಾರು ಡಿಕ್ಕಿ ! ಚಿಕ್ಕಮಗಳೂರು ನಿವಾಸಿ ಸಾವು!
Car hits tree near Bhadravathi HK junction Chikkamagaluru resident dies
![ಭದ್ರಾವತಿ ಹೆಚ್.ಕೆ.ಜಂಕ್ಷನ್ ಬಳಿ ಮರಕ್ಕೆ ಕಾರು ಡಿಕ್ಕಿ ! ಚಿಕ್ಕಮಗಳೂರು ನಿವಾಸಿ ಸಾವು!](https://malenadutoday.com/uploads/images/202312/image_870x_657e8d36c5477.webp)
SHIVAMOGGA| Dec 16, 2023 | ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ದಿನ ಅಪಘಾತವೊಂದು ಸಂಭವಿಸಿದೆ. ಕಾರೊಂದು ರಸ್ತೆಯ ಬದಿಯಲ್ಲಿರುವ ಮರವೊಂದಕ್ಕೆ ಡಿಕ್ಕಿಯಾಗಿರುವ ಬಗ್ಗೆ ಇಲ್ಲಿ ವರದಿಯಾಗಿದೆ
READ : ಶಿವಮೊಗ್ಗ KSRTC ಬಸ್ ನಿಲ್ದಾಣದ ನಿರೀಕ್ಷಣಾ ಕೊಠಡಿಯಲ್ಲಿ ಕುಳಿತಲ್ಲೇ ವ್ಯಕ್ತಿ ಸಾವು!
ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ /Bhadravathi Rural Police Station
ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಲಿಮಿಟ್ಸ್ ನಲ್ಲಿ ಸಿಗುವ ಹೆಚ್.ಕೆ.ಜಂಕ್ಷನ್ ಬಳಿ ಈ ಘಟನೆ ಸಂಭವಿಸಿದೆ. ಶನಿವಾರ ಬೆಳಗ್ಗಿನ ಜಾವ ಸಂಭವಿಸಿದ ಘಟನೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣದ ನಿವಾಸಿ ಮಂಜುನಾಥ್ ಎಂಬ 22 ವರ್ಷದ ಯುವಕ ಸಾವನ್ನಪ್ಪಿದ್ದಾನೆ.
ಇವರು ಶಿವಮೊಗ್ಗದಿಂದ ಬಿಆರ್ಪಿ ಮಾರ್ಗವಾಗಿ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿದೆ.