Narendra modi/ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕುಂಸಿ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್ !

Case registered at Kumsi police station in connection with PM Narendra Modi's event / ಶಿವಮೊಗ್ಗದ ಆಯನೂರಿನಲ್ಲಿ ನಡೆದ ನರೇಂದ್ರ ಮೋದಿಯವರ ಸಮಾವೇಶದ ಸಿದ್ದತೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ದೂರು ನೀಡಿದ್ದಾರೆ. ಈ ಸಂಬಂದ ಕುಂಸಿ ಠಾಣೆಯಲ್ಲಿ ಎಫ್​ಐಆರ್ ಸಹ ಆಗಿದೆ

Narendra modi/  ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕುಂಸಿ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್ !

KARNATAKA NEWS/ ONLINE / Malenadu today/ May 7, 2023 GOOGLE NEWS 

ಶಿವಮೊಗ್ಗ/ ಪ್ರಧಾನಿ ನರೇಂದ್ರ ಮೋದಿ ಯವರು ಪಾಲ್ಗೊಂಡಿದ್ದ ಆಯನೂರು ಸಮಾವೇಶದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣವೊಂದು ದಾಖಲಾಗಿದೆ. 

bhadravati /  ಭದ್ರಾವತಿ ವಿಧಾನಸಭಾ ಕ್ಷೇತ್ರ ! ಯಾರು ನಿರ್ಣಾಯಕ? ಕ್ಷೇತ್ರದಲ್ಲಿ ಹೇಗಿದೆ ಪೈಪೋಟಿ 

ಶಿವಮೊಗ್ಗದ ಕುಂಸಿ ಪೊಲೀಸ್ ಸ್ಟೇಷನ್  ನಲ್ಲಿ ಈ ಸಂಬಂಧ ಕೇಸ್ ಆಗಿದ್ದು, ಚುನಾವಣಾ ಫ್ಲೈಯಿಂಗ್ ಸ್ಕ್ವ್ಯಾಡ್​ ಅಧಿಕಾರಿ ನೀಡಿದ ದೂರಿನನ್ವಯ ಚುನಾವಣಾ ಏಜೆಂಟ್ ವಿರುದ್ಧ  ಎಫ್​ಐಆರ್ ಆಗಿದೆ. 

ನಡೆದಿದ್ದೇನು?

ದಿನಾಂಕ:-06-05-2023 ರಂದು  ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರ -111 ವ್ಯಾಪ್ತಿಯಲ್ಲಿ ಬರುವ ಆಯನೂರು ವ್ಯಾಪ್ತಿಯಲ್ಲಿ,    ಬಿಜೆಪಿ ಪಕ್ಷದವರು ಪ್ರಧಾನ ಮಂತ್ರಿಯವರ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ಸಂಬಂಧ ಪಟ್ಟಂತೆ ಕಟೌಟ್‌ ಹಾಗೂ ಪ್ಲಾಗ್ ಗಳನ್ನು ಕಟ್ಟುತ್ತಿದ್ದರು.

narendramodi/  ನರೇಂದ್ರ ಮೋದಿ ನಮಸ್ಕಾರವನ್ನು ಮನೆಮನೆಗೂ ತಲುಪಿಸಿ ಎಂದು ಟಾಸ್ಕ್​ ಕೊಟ್ಟ ಪ್ರಧಾನಿ!  ಮೋದಿ ಮಾತಿನ ಪೂರ್ತಿ ವಿವರ ಇಲ್ಲಿದೆ

ಆಯನೂರು ಕೋಹಳ್ಳಿ, ಬಸ್‌ ನಿಲ್ದಾಣ, ವಿದ್ಯುತ್ ಕಂಬಗಳು ಅರಣ್ಯ ಇಲಾಖೆ ಸಂಬಂಧಿಸಿದ ಬೋರ್ಡಗಳಿಗೆ ಪಕ್ಷದ ಬಾವುಟಗಳನ್ನು ಕಟ್ಟಿದ್ದಾರೆ. ಅನುಮತಿ ಪಡೆಯದೇ  ಚುನಾವಣಾ ನೀತಿ ಸಂಹಿತೆ ಉಲಂಘಿಸಿಲಾಗಿದೆ ಎಂದು ಈ ಸಂಬಂಧ ದೂರು ನೀಡಲಾಗಿದೆ. 

  KARNATAKA OPEN PLACE DISFIGUREMENT ACT 1951 & 1981 (U/s-3); IPC 1860 (U/s-188)  ಅಡಿಯಲ್ಲಿ ಪ್ರಕರಣ ಸಂಬಂಧ ಕೇಸ್ ದಾಖಲಾಗಿದೆ.  


SSLC /  ಇಂದೆ ಪ್ರಕಟವಾಗಲಿದೆ ಎಸ್​ಎಸ್​​ಎಲ್​ಸಿ ಪರೀಕ್ಷೆ ಫಲಿತಾಂಶ ! ವಿವರ ಇಲ್ಲಿದೆ 

SSLCREULT/  2022–23ನೇ ಸಾಲಿನ ಎಸ್‌ಎಸ್‌ಎಲ್‌ಸಿ(sslc)  ಎಕ್ಸಾಮ್​ನ ರಿಸಲ್ಟ್  ಇಂದು ಹೊರಬೀಳಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಫಲಿತಾಂಶ ವಿಳಂಭವಾಗಲಿದೆ ಎನ್ನಲಾಗಿತ್ತು. ಆದರೆ ಇದೀಗ ಇವತ್ತೆ ರಿಸಲ್ಟ್ ಹೊರಕ್ಕೆ ಬರಲಿದೆ. 

ಈ ಸಾಲಿನ  ವಾರ್ಷಿಕ ಪರೀಕ್ಷೆಯ ಫಲಿತಾಂಶ ಇವತ್ತು ಅಂದರೆ ಮೇ 8ರಂದು ಬೆಳಿಗ್ಗೆ 10ರ ವೇಳೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ. 

ಎಲ್ಲಿ ನೋಡಬಹುದು ರಿಸಲ್ಟ್​  

ಬೆಳಿಗ್ಗೆ 11ರ ಬಳಿಕ http://karresults.nic.in ಜಾಲತಾಣದಲ್ಲೂ ವಿದ್ಯಾರ್ಥಿಗಳು ಫಲಿತಾಂಶ ನೋಡಬಹುದಾಗಿದೆ..ಮಧ್ಯಾಹ್ನದ ವೇಳೆಗೆ ಎಲ್ಲಾ ಶಾಲೆಗಳಲ್ಲೂ ರಿಸಲ್ಟ್​ ಪ್ರಕಟಿಸಲಾಗುವುದು ಹಾಗೂ  ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದ ಮೊಬೈಲ್‌ ಸಂಖ್ಯೆಗೆ ಎಸ್‌ಎಂಎಸ್‌ ಮೂಲಕವೂ ಫಲಿತಾಂಶದ ವಿವರ ಕಳುಹಿಸಲಾಗುವುದು ಎಂದು ಮಂಡಳಿ ತಿಳಿಸಿದೆ

ಇನ್ನಷ್ಟು ವಿವರ

ಕಳೆದ  ಮಾರ್ಚ್‌ 31 ರಿಂದ ಏಪ್ರಿಲ್‌ 15ರ ವರೆಗೆ ರಾಜ್ಯದ 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿತ್ತು. ಒಟ್ಟು. 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಜಿಲ್ಲಾ ಕೇಂದ್ರಗಳಲ್ಲೂ ಮೌಲ್ಯಮಾಪನ ಕಾರ್ಯ ನಡೆದಿದ್ದು, 63 ಸಾವಿರ ಶಿಕ್ಷಕರು ಭಾಗವಹಿಸಿದ್ದರು.


ಹೈವೆಯಲ್ಲಿ ನಿಯಂತ್ರಣ ತಪ್ಪಿದ ಕಾರು/ ಧರೆಗೆ ಗುದ್ದಿ ನುಜ್ಜುಗುಜ್ಜು! 

ಹೊಸನಗರ ಶಿವಮೊಗ್ಗ/ ಇಲ್ಲಿನ ಗವಟೂರಿನಲ್ಲಿ ಕಾರೊಂದು ಧರೆಗೆ ಗುದ್ದಿ ಅಪಘಾತವಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವರು ಗಾಯಗೊಂಡಿದ್ದಾರೆ. 

Read/ Bhadravati/  ಸಂಜೆ ಹೊತ್ತಿನಲ್ಲಿ ಮನೆಗೆ ನುಗ್ಗಿ ದರೋಡೆ! ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ರಾ ಪೊಲೀಸ್ 

ಹೊಸನಗರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ವೇಳೆ, ಮಾರುತಿ  ಬಲೆನೋ ವಾಹನಮ, ಚಾಲಕನ ನಿಯಂತ್ರಣ ತಪ್ಪಿ, ರೈಟಿಗೆ ಪಲ್ಟಿಯಾಗಿದೆ. ಅಲ್ಲದೆ ರಸ್ತೆ ಪಕ್ಕದಲ್ಲಿದ್ದ ಧರೆಗೆ ಗುದ್ದಿ ಕಾರು ಅಲ್ಲಿಯೇ ನಿಂತಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಂಜಿನಿಯರ್​​​​ ಒಬ್ಬರಿಗೆ ಗಾಯವಾಗಿದ್ದು, ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. 


Bhadravati/ ಕ್ರಿಕೆಟ್ ಬೆಟ್ಟಿಂಗ್/ ನಾಲ್ವರ ವಿರುದ್ಧ ದಾಖಲಾಯ್ತು ಕೇಸ್​ !

ಭದ್ರಾವತಿ/ ಶಿವಮೊಗ್ಗ ಭದ್ರಾವತಿ ಓಲ್ಡ್​ ಟೌನ್​ ಪೊಲೀಸರು ಕ್ರಿಕೆಟ್ ಬೆಟ್ಟಿಂಗ್ ನಡೆಸ್ತಿದ್ದ ನಾಲ್ವರನ್ನ ಬಂಧಿಸಿದ್ದಾರೆ.

ಮಾಜಿ ಶಾಸಕರ ತೋಟದ ಮನೆಗೆ ನುಗ್ಗಿ ಒಂದು ಕೆಜಿ ಚಿನ್ನ ದರೋಡೆ! ಬಂದೂಕು ತೋರಿಸಿ 15 ಜನರ ತಂಡದ ಕೃತ್ಯ!

ಕಳೆದ ಆರನೇ ತಾರೀಖು, ಓಲ್ಡ್​ ಟೌನ್​ ಪಿಎಸ್​ಐಗೆ  ಬೆಟ್ಟಿಂಗ್ ನಡೆಯುತ್ತಿರುವುದರ ಬಗ್ಗೆ ಮಾಹಿತಿ ಬಂದಿದೆ.

ನಗರದ ಮಾಧವಾಚಾ‌ರ್​ ಸರ್ಕಲ್‌ ಭೂತನಗುಡಿ, ಟಿಕೆ ರಸ್ತೆ, ಗಾಂಧಿ ಸರ್ಕಲ್‌ ,ಗುಂಡುರಾವ್‌ ಶೆಡ್‌ ಮುಂತಾದ ಏರಿಯಾಗಳಲ್ಲಿ ಗಸ್ತು ಹೊರಟಿದ್ದಾರೆ. ಈ ವೇಳೇ  ಟಿಕೆ ರಸ್ತೆ ಫೈ ಓವರ್ ಕೆಳಗೆ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿರುವುದು ಕಂಡು ಬಂದಿದೆ. ಸದ್ಯ ಪ್ರಕರಣ ಸಂಬಂಧ ಪೊಲೀಸರೇ ಕೋರ್ಟ್ ಪರ್ಮಿಶನ್​ ಪಡೆದು ಸಮುಟೋ ಕೇಸ್ ದಾಖಲಿಸಿದ್ದು, ಮಂಜುನಾಥ್​ ಸೇರಿದಂತೆ ನಾಲ್ವರ ವಿರುದ್ಧ  ಕಲಂ 78(1)(A) (VI) ಕೆ.ಪಿ,ಆಕ್ಟ್ ನಡಿಯಲ್ಲಿ ಎಫ್​ಐಆರ್​ ದಾಖಲಾಗಿದೆ.  


Read/ Bhadravati/  ಸಂಜೆ ಹೊತ್ತಿನಲ್ಲಿ ಮನೆಗೆ ನುಗ್ಗಿ ದರೋಡೆ! ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ರಾ ಪೊಲೀಸ್ 

Read/ Kichcha Sudeepa/  ನಟ ಸುದೀಪ್​ಗೆ ಬೆದಕಿಗೆ ಹಾಕಿದ್ದ ಆಪ್ತ ಡೈರಕ್ಟರ್​ ಬಂಧನ! ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ? 

Malenadutoday.com Social media