ಕ್ಯಾಶಿಯರ್​ ಕೊಲೆ ಪ್ರಕರಣ ! ಅರೆಸ್ಟ್ ಮಾಡಲು ಹೋದ ಪೊಲೀಸರ ಮೇಲೆ ಆರೋಪಿ ಹಲ್ಲೆ!ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪಿಎಸ್​ಐ

Cashier murder case! Accused assaults cops who went to arrest him! PSI shot in the leg and arrested

ಕ್ಯಾಶಿಯರ್​ ಕೊಲೆ ಪ್ರಕರಣ !  ಅರೆಸ್ಟ್ ಮಾಡಲು ಹೋದ ಪೊಲೀಸರ ಮೇಲೆ ಆರೋಪಿ ಹಲ್ಲೆ!ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪಿಎಸ್​ಐ

KARNATAKA NEWS/ ONLINE / Malenadu today/ Jun 5, 2023 SHIVAMOGGA NEWS

ಶಿವಮೊಗ್ಗ/ ಆಯನೂರಿನ ನವರತ್ನ ಬಾರ್ ನಲ ಬಳಿಯಲ್ಲಿ ನಡೆದಿದ್ದ ಕೊಲೆ ಪ್ರಕರಣ ಸಂಬಂಧ, ಆರೋಪಿಗಳನ್ನ ಬಂಧಿಸುವ ತೆರಳಿದ್ದ ಪೊಲೀಸರ ಮೇಲೆಯೇ ಆರೋಪಿ ಸತೀಶ್ ಹಲ್ಲೆ ಮಾಡಲು ಮುಂದಾಗಿದ್ಧಾನೆ. ಈ ವೇಳೆ ಪೊಲೀಸರು ರಕ್ಷಣಾತ್ಮಕವಾಗಿ ಆತನ ಕಾಲಿಗೆ ಗುಂಡು ಹೊಡೆದಿದ್ಧಾರೆ. 

ಹಳೇ ಕಿರಿಕ್​! ಆಯನೂರಿನಲ್ಲಿ ನಿನ್ನೆ ರಾತ್ರಿ, ಬಾರ್ ಕ್ಯಾಶಿಯರ್​ಗೆ ಚುಚ್ಚಿ​ ಕೊಲೆ! ಪೊಲೀಸರೇ ಸಾಕ್ಷಿಯಾದರಾ ಭೀಕರ ಘಟನೆಗೆ?

ನಿನ್ನೆ ಮಧ್ಯರಾತ್ರಿ ನಡೆದಿದ್ದ ಕೊಲೆ ಸಂಬಂಧ ಆರೋಪಿ ಸತೀಶ್​ನನ್ನ ಬಂಧಿಸಲು ಪಿಎಸ್​ಐ ಒಬ್ಬರು ಹಾಗೂ ಪ್ರವೀಣ್ ಹಾಗೂ ಶಿವರಾಜ್​ ಎಂಬಿಬ್ಬರು ಸಿಬ್ಬಂದಿ ತೆರಳಿದ್ದರು. ಈ ವೇಳೆ ಆರೋಪಿ ಸತೀಶ್​ ಪೊಲೀಸರ ಮೇಲೆ ಚಾಕುವಿನಿಂದ ಅಟ್ಯಾಕ್ ಮಾಡಲು ಪ್ರಯತ್ನಿಸಿದ್ದಾನೆ. ಎಚ್ಚರಿಕೆ ನೀಡಿ ಗಾಳಿಯಲ್ಲಿ ಗುಂಡು ಹೊಡೆದ ಹೊರತಾಗಿಯು ಸತೀಶ್ ದಾಳಿಗೆ ಮುಂದಾದಾಗ ಪಿಎಸ್​ಐ ರವರು ಆತನ ಕಾಲಿಗೆ ಗುಂಡು ಹಾರಿಸಿದ್ಧಾರೆ. ಘಟನೆಯಲ್ಲಿ ಓರ್ವ ಸಿಬ್ಬಂದಿಗೆ ಗಾಯವಾಗಿದ್ದು, ಅವರನ್ನ ಹಾಗೂ ಆರೋಪಿ ಸತೀಶ್​ನನ್ನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.