ಕಂದಕಕ್ಕೆ ಉರುಳಿದ ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿದ್ದ ಬಸ್! ಓರ್ವ ಮಹಿಳೆ ಸಾವು!

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನಲ್ಲಿ ನಡೆದ ಘಟನೆ

ಕಂದಕಕ್ಕೆ ಉರುಳಿದ ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿದ್ದ ಬಸ್! ಓರ್ವ ಮಹಿಳೆ ಸಾವು!

KARNATAKA NEWS/ ONLINE / Malenadu today/ Nov 4, 2023 SHIVAMOGGA NEWS

CHIKKAMAGALURU | ಚಾಲಕನ ನಿಯಂತ್ರಣ ತಪ್ಪಿದ ಮುಂದಕ್ಕೆ ಸಾಗಿದ ಬಸ್​ವೊಂದು ಕಂದಕಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂಡಿಗರೆ ತಾಲ್ಲೂಕಿನಲ್ಲಿ ಸಂಭವಿಸಿದೆ. ಇಲ್ಲಿನ ಚೀಕನಹಳ್ಳಿ ಕ್ರಾಸ್ ಬಳಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. 

READ : ಉದ್ಯಮಿ ಸಿದ್ದಾರ್ಥ್​ ರೀತಿಯಲ್ಲಿ ನೇತ್ರಾವತಿ ನದಿಗೆ ಹಾರಿದ ಚಿಕ್ಕಮಗಳೂರು ವ್ಯಾಪಾರಿ!

ಬೆಂಗಳೂರು ನಿಂದ ಹೊರನಾಡು ಪ್ರವಾಸಕ್ಕೆ ಹೋಗುತ್ತಿದ್ದ ಟೂರಿಸ್ಟ್ ಬಸ್ ಇದಾಗಿತ್ತು. ಬೆಂಗಳೂರು-ಹಾಸನ ರೂಟ್​ನಲ್ಲಿ ಬಂದ ಬಸ್ ಮೂಡಿಗೆರೆ ಮಾರ್ಗವಾಗಿ ಹೊರನಾಡುಗೆ ಹೋಗಬೇಕಿತ್ತು. ಈ ಮಧ್ಯೆ ಈ ಘಟನೆ ಸಂಭವಿಸಿದೆ.  ಇನ್ನೂ ಘಟನೆಯಲ್ಲಿ ಗಾಯಗೊಂಡವರಿಗೆ ಬೇಲೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

 ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ಪ್ರಪಾತಕ್ಕೆ ಉರುಳಿ ಬಿದ್ದು, ಓರ್ವ ಮಹಿಳೆ ಮೃತಪಟ್ಟು, ಐವರಿಗೆ ಗಂಭೀರ ಗಾಯವಾದ ಘಟನೆ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ ಕ್ರಾಸ್ ಬಳಿ ನ.4ರ ಶನಿವಾರ ನಡೆದಿದೆ.