ಶ್ರೀಗಂಧದ ಕಳ್ಳರ ಬೇಟೆ | ಬರೋಬ್ಬರಿ ಮಾಲಿನ ಜೊತೆ ಕೆಟಿಎಂ ಬೈಕ್​ ಸಮೇತ ಸಿಕ್ಕಿಬಿದ್ದ ಆರೋಪಿಗಳು!

Chikkamagaluru Sandalwood Theft Case ’ಚಿಕ್ಕಮಗಳೂರು | ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಇಲ್ಲಿನ ಬಸವನಹಳ್ಳಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರ ವ್ಯಾಪ್ತಿಯಲ್ಲಿ ನಡೆದಿದ್ದ ಶ್ರೀಗಂಧದ ಕಳವು ಪ್ರಕರಣಗಳ ಬಗ್ಗೆ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯಲ್ಲಿ ಹಲವು ದೂರು ದಾಖಲಾಗಿದ್ದವು. ಈ ನಿಟ್ಟಿನಲ್ಲಿ ಎಸ್​ಪಿ ಜಿತೇಂದ್ರ ಕುಮಾರ್ ದಯಾಮ  ವಿಶೇಷ ತನಿಖಾ ತಂಡ ರಚಿಸಿದ್ದರು. ಈ ತಂಡ ಇದೀಗ ಕಾರ್ಯಾಚರಣೆ ಮುಗಿಸಿ ಆರೋಪಿಗಳನ್ನ ಅರೆಸ್ಟ್ ಮಾಡಿದೆ.  ಬಂಧಿತ ಆರೋಪಿಗಳನ್ನು ನಗರದ ಕೆಂಪನಹಳ್ಳಿಯ ಆಂಜನೇಯ, ಬಸವನಹಳ್ಳಿಯ ಸುಬ್ರಹ್ಮಣ್ಯ ಹಾಗೂ ಅರವಿಂದ ನಗರದ ಸಂಜಯ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ 93 ಕೆಜಿ ತೂಕದ ಶ್ರೀಗಂಧದ ತುಂಡುಗಳನ್ನು ಹಾಗೂ ಕೃತ್ಯ ಎಸಗಲು ಬಳಸುತ್ತಿದ್ದ 2 ಲಕ್ಷ ರೂಪಾಯಿ ಮೌಲ್ಯದ ಕೆಟಿಎಂ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.  

Chikkamagaluru Sandalwood Theft Case
Chikkamagaluru Sandalwood Theft Case

 

ಶಿವಮೊಗ್ಗ ಉದ್ಯಮಿಗೆ ಮಹಾರಾಷ್ಟ್ರದಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ, 3 ದಿನ ಕೂಡಿಟ್ಟು 2.17 ಕೋಟಿ ಲೂಟಿ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

Chikkamagaluru Sandalwood Theft Case

ಚಿಕ್ಕಮಗಳೂರು: ಶ್ರೀಗಂಧ ಕಳ್ಳರ ಜಾಲ ಪತ್ತೆ; 93 ಕೆಜಿ ಗಂಧದ ತುಂಡುಗಳೊಂದಿಗೆ ಮೂವರು ಅರೆಸ್ಟ್ Chikkamagaluru Sandalwood Theft Case: Three Arrested, 93 Kg Sandalwood Seized