SHIVAMOGGA CRIME NEWS TODAY

ಶಿವಮೊಗ್ಗ ಸೆಂಟ್ರಲ್​ ಜೈಲ್​ ನಲ್ಲಿ ಸ್ಟೀಲ್​ ಲೋಟದಿಂದ ಹಲ್ಲೆ! ಕೇಸ್ ದಾಖಲು!

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Shivamogga Central Jail / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ಕೇಂದ್ರ ಕಾರಾಗೃಹ / ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬನ ಮೇಲೆ ಇನ್ನೊಬ್ಬ ಕೈದಿ ಹಲ್ಲೆ ಮಾಡಿದ ಕಾರಣಕ್ಕೆ ಜೈಲು ಮುಖ್ಯ ಅಧೀಕ್ಷಕರ ಡಾ. ಪಿ ರಂಗನಾಥ್​ ತುಂಗಾನಗರ ಪೊಲೀಸ್ ಠಾಣೆಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್​ಐಆರ್​ನಂತೆ ಸುದ್ದಿ ವಿವರ ಹೀಗಿದೆ.

ಕಳೆದ ಜೂನ್ 16 ರಂದು ಸಂಜೆ ಸುಮಾರು 6 ಗಂಟೆಗೆ ಈ ಘಟನೆ ನಡೆದಿದ್ದು, ಕಾರಾಗೃಹದಲ್ಲಿರುವ (Shivamogga Central Jail) ಕುಮಧ್ವತಿ ವಿಭಾಗದ ಕೊಠಡಿಯಲ್ಲಿರಿಸಲಾಗಿದ್ದ ವಿಚಾರಣಾಧೀನ ಬಂಧಿ, ಕಾರಾಗೃಹದ ಆಸ್ಪತ್ರೆಗೆ ಹೋಗುತ್ತಿದ್ದರು. ಈ ವೇಳೆ ಅಲ್ಲಿಯೇ ತುಂಗಾ ವಿಭಾಗದ ಕೊಠಡಿಯಲ್ಲಿದ್ದ ಶಿಕ್ಷಾಬಂಧಿ ಕೈದಿಯನ್ನ ಮಾತನಾಡಿಸಲು ತೆರಳಿದ್ದಾರೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ಶುರುವಾಗಿ ಜಗಳವಾಗಿದೆ. ಆಗ ಶಿಕ್ಷಾ ಬಂಧಿ ತನ್ನ ಕೈಲಿದ್ದ ಸ್ಟೀಲ್ ಲೋಟದಿಂದ ವಿಚಾರಣಾಧೀನ ಕೈದಿ ಮೇಲೆ ಹಲ್ಲೆ ಮಾಡಿದ್ದಾನೆ.

ಪರಿಣಾಮ ವಿಚಾರಣಾಧೀನ ಕೈದಿ ಗಾಯಗೊಂಡಿದ್ದು, ಆತನನ್ನು ಸ್ಥಳಕ್ಕೆ ಧಾವಿಸಿದ ಜೈಲು ಸಿಬ್ಬಂದಿ ರೆಸ್ಕ್ಯೂ ಮಾಡಿದ್ದಾರೆ. ಪರಿಸ್ಥಿತಿಯನ್ನು ತಿಳಿಗೊಳಿಸಿ ಕಾರಾಗೃಹದ ಆಸ್ಪತ್ರೆಯಲ್ಲಿಯೇ ವಿಚಾರಣಾಧೀನ ಕೈದಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.

ಈ ಘಟನೆ ಸಂಬಂಧ ಕಾರಾಗೃಹದ ಸುಗಮ ಆಡಳಿತಕ್ಕೆ ಧಕ್ಕೆ ತಂದು, ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಶಿಕ್ಷಾ ಬಂಧಿ ವಿರುದ್ಧ ಡಾ. ರಂಗನಾಥ್ ಅವರು ನೀಡಿದ ಅಧಿಕೃತ ದೂರನ್ನು ಆಧರಿಸಿ ತುಂಗಾನಗರ ಪೊಲೀಸ್ ಸ್ಟೇಷನ್​ನಲ್ಲಿ ಎಫ್​ಐಆರ್ ದಾಖಲಾಗಿದೆ.

Whatsapp / https://chat.whatsapp.com/JrsZ8He4nN600n0r3tJItz

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ