ಚೆಸ್​​ ನಲ್ಲಿ ಗೆದ್ದು ಬೆಂಗಳೂರು ಮಟ್ಟಕ್ಕೆ ಆಯ್ಕೆಯಾದ ಮಾಳೂರು ಕುವೆಂಪು ಶಾಲೆಯ 7ನೇ ತರಗತಿಯ ವಿದ್ಯಾರ್ಥಿ!

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Oct 8, 2023 SHIVAMOGGA NEWS

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ  ತಾಲ್ಲೂಕು ಮಾಳೂರು ಕುವೆಂಪು ಶಾಲೆಯ 7ನೇ ತರಗತಿಯ ವಿದ್ಯಾರ್ಥಿಯಾದ ದೀಕ್ಷಿತ್  ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿಜೇತನಾಗಿದ್ದಾರೆ. 

ಅಲ್ಲದೆ ಈ ಮೂಲಕ ಬೆಂಗಳೂರಿನಲ್ಲಿ ನಡೆಯುವ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ಚೆಸ್​ ಸ್ಪರ್ದೆಯಲ್ಲಿ ಜಿಲ್ಲೆಯ ಬಾಲಕನೊಬ್ಬ ವಿಶಿಷ್ಟ ಸಾಧನೆ ಮಾಡುತ್ತಿರುವುದು ಕುತೂಹಲಕಾರಿಯಾಗಿದೆ. ಮುಂದಿನ ಮಟ್ಟದಲ್ಲಿ ಗೆಲುವು ಸಾಧಿಸಿದರೆ, ರಾಜ್ಯಮಟ್ಟದಲ್ಲಿ ಬೆಳೆಯವ ಅವಕಾಶ ವಿದ್ಯಾರ್ಥಿಗಿದೆ. 

ಇನ್ನೂ  ಸರ್ಕಾರಿ ಶಾಲೆ ಯಾವ ಶಾಲೆಗೂ ಕಮ್ಮಿಯಿಲ್ಲ ಎಂದು ಸಾಬೀತು ಮಾಡಿದ್ದಾರೆ. ಮುಂದೆ ನಡೆಯಲಿರುವ ವಿಭಾಗೀಯ ಮಟ್ಟದಲ್ಲು ಗೆದ್ದು ಸರ್ಕಾರಿ ಶಾಲೆಯ ಗೌರವ ಇನ್ನಷ್ಟು ಹೆಚ್ಚಿಸಲಿ ಎಂದು   ಶಾಲಾ ಮುಖ್ಯ ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ. ಹಾಗೂ ಸಹ ಶಿಕ್ಷಕರು ಶುಭಕೋರಿದ್ದಾರೆ. 


ಇನ್ನಷ್ಟು ಸುದ್ದಿಗಳು 

  1.  R M MANJUNATH GOWDA ರವರ ಮನೆಗಳ ಮೇಲೆ ED ದಾಳಿಗೆ ಕಾರಣವೇನು? ಏನಿದು ಪ್ರಕರಣ?

  2. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು ಮಹತ್ವದ ಪ್ರಕಟಣೆ! ಶಿವಮೊಗ್ಗದಲ್ಲಿಯೇ ನೋಂದಣಿ ಮಾಡಿಕೊಳ್ಳಿ

  3. ಶಿವಮೊಗ್ಗ ಮತ್ತೆ ಆಗುತ್ತಾ ಪವರ್ ಸೆಂಟರ್! ನವರಾತ್ರಿ ನಂತರ ಏನಾಗುತ್ತೆ? ರಾಜ್ಯ ರಾಜಕಾರಣದ ಕುತೂಹಲದ ಸುದ್ದಿ


 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor