SHIVAMOGGA NEWS TODAY

ರಾಜ್ಯದಲ್ಲಿ ಬ್ಯಾನ್​ ಆಗತ್ತಾ ಗುಟ್ಕಾ, ಪಾನ್ ಮಸಾಲಾ?: ಸಿಎಂ ಡಿಕೆ ಶಿವಕುಮಾರ್ ಕೊಟ್ಟ ವಾರ್ನಿಂಗ್​ ಏನು

Prathapa thirthahalli ನವೀಕರಣ: 29 ಜೂನ್ 2026, 12:22 ಅಪರಾಹ್ನ ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಬೆಂಗಳೂರು, : ರಾಜ್ಯದಲ್ಲಿ ಮಾರಾಟವಾಗುವ ಗುಟ್ಕಾ ಹಾಗೂ ಪಾನ್ ಮಸಾಲಾದಂತಹ ತಂಬಾಕು ಉತ್ಪನ್ನಗಳಲ್ಲಿ ಅಲ್ಪ ಪ್ರಮಾಣದ ಮಾದಕ ದ್ರವ್ಯಗಳು ಕಂಡುಬಂದರೂ ಸಹ ಅವುಗಳನ್ನು ತಕ್ಷಣವೇ ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. 

ಶಿವಮೊಗ್ಗ: ಬಾವಿ ಮೋಟಾರ್ ಆನ್ ಮಾಡಲು ಹೋಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

ಭಾನುವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನಾಚರಣೆ ಮತ್ತು ‘ನಶಾ ಮುಕ್ತ್ ಭಾರತ್’ ಅಭಿಯಾನದಲ್ಲಿ ಪಾಲ್ಗೊಂಡು ಅವರು ಉತ್ಪಾದಕರಿಗೆ ಈ ಕಠಿಣ ಸಂದೇಶ ರವಾನಿಸಿದ್ದಾರೆ.

ಕೆಲವರು ಪಾನ್ ಮಸಾಲಾ ಮತ್ತು ಗುಟ್ಕಾ ಸೇವನೆಯ ಮೂಲಕ ಮಾದಕ ನಶೆ ಅಥವಾ ಕಿಕ್ ಪಡೆದುಕೊಳ್ಳುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ಸಿಎಂ ತಿಳಿಸಿದರು. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಿರುವ ಅವರು, ಇಂತಹ ಹಾನಿಕಾರಕ ಉತ್ಪನ್ನಗಳನ್ನು ನಿಷೇಧಿಸುವುದರಿಂದ ಸರ್ಕಾರಕ್ಕೆ ಸುಮಾರು 100 ಕೋಟಿ ರೂಪಾಯಿಗಳಷ್ಟು ಆದಾಯದ ನಷ್ಟವಾಗಬಹುದು. ಆದರೆ, ನಮಗೆ ಕಂದಾಯಕ್ಕಿಂತಲೂ ಸಾರ್ವಜನಿಕರ ಆರೋಗ್ಯ ಮತ್ತು ಯುವ ಪೀಳಿಗೆಯ ಭವಿಷ್ಯವೇ ಅತ್ಯಂತ ಪ್ರಮುಖವಾಗಿದೆ. ತಂಬಾಕು ಉತ್ಪನ್ನಗಳಲ್ಲಿ ಸಣ್ಣ ಪ್ರಮಾಣದ ಡ್ರಗ್ಸ್ ಮಿಶ್ರಣ ಮಾಡಿರುವುದು ದೃಢಪಟ್ಟರೆ, ಇಡೀ ಕರ್ನಾಟಕದಲ್ಲಿ ಇವುಗಳ ಮಾರಾಟವನ್ನು ನಿಷೇಧಿಸಲು ಸರ್ಕಾರ ಹಿಂಜರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

CM DK Shivakumar Warns Tobacco Manufacturers

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.