SHIVAMOGGA NEWS TODAY

ಶಿವಮೊಗ್ಗ: ಜಿಲ್ಲೆಯ ಮೂವರಿಗೆ 2025ನೇ ಸಾಲಿನ ಮುಖ್ಯಮಂತ್ರಿ ಪದಕ ಘೋಷಣೆ!

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಪೊಲೀಸ್ ಇಲಾಖೆಯಲ್ಲಿನ ಅತ್ಯುತ್ತಮ ಸೇವೆ ಮತ್ತು ಕರ್ತವ್ಯ ನಿಷ್ಠೆಯನ್ನು ಗುರುತಿಸಿ ನೀಡಲಾಗುವ ಪ್ರತಿಷ್ಠಿತ 2025ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆಶಿವಮೊಗ್ಗ ಜಿಲ್ಲೆಯ ಮೂವರು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಭಾಜನರಾಗಿದ್ದಾರೆ. 

ಶಿವಮೊಗ್ಗ: ರೈಲ್ವೆ ಸ್ಟೇಷನ್ ಬಳಿ ನಿಂತಿದ್ದ ಗೂಡ್ಸ್ ಲಾರಿ ಬೆಂಕಿಗೆ ಭಸ್ಮ; ತಪ್ಪಿದ ಭೀಕರ ದುರಂತ!

ಪದಕಕ್ಕೆ ಭಾಜನರಾದ ಸಾಧಕರು:

ಈ ಬಾರಿಯ ಸಿಎಂ ಪದಕಕ್ಕೆ ಆಯ್ಕೆಯಾದ ಶಿವಮೊಗ್ಗ ಜಿಲ್ಲೆಯ ಗಣ್ಯರ ವಿವರಗಳು ಹೀಗಿವೆ:

ಎಸ್. ರಮೇಶ್ ಕುಮಾರ್: ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು 

ಅಣ್ಣಪ್ಪ ಎನ್ (HC 71): ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್. 

ರಾಘವೇಂದ್ರ ಜಿ (HC 336): ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್. 

ಎಸ್ಪಿ ನಿಖಿಲ್ ಬಿ. ಅವರಿಂದ ಅಭಿನಂದನೆ

ಜಿಲ್ಲೆಯ ಈ ಮೂವರು ಸಾಧಕರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರಾದ  ನಿಖಿಲ್ ಬಿ. ಅವರು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ. ಇಲಾಖೆಯ ಘನತೆಯನ್ನು ಹೆಚ್ಚಿಸಿದ ಇವರ ಸಾಧನೆಯು ಉಳಿದ ಸಿಬ್ಬಂದಿಗಳಿಗೂ ಮಾದರಿಯಾಗಿದೆ ಎಂದು ಅವರು ಶ್ಲಾಘಿಸಿದ್ದಾರೆ.

CM Medal 2025 Honour for Three Shivamogga Cops

CM Medal 2025 Honour for Three Shivamogga Cops
CM Medal 2025 Honour for Three Shivamogga Cops

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.