BREAKING NEWS : ಶಿಫಾರಸ್ಸುಗಳಿಗೆ ಸಿಎಂ ಶಾಕ್! ತಹಶೀಲ್ದಾರ್ ಸೇರಿ ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆಗಳಿಗೆ ಬ್ರೇಕ್
BREAKING NEWS: CM shock to the recommendations! Transfers of revenue department officials, including tahsildars, stopped
ಚುನಾವಣೆ ಸಮೀಪಿಸುತ್ತಿದ್ದಂತೆ ಅಧಿಕಾರಿಗಳ ವರ್ಗಾವಣೆಯು ಸಹ ಹೆಚ್ಚಾಗುತ್ತಿದೆ. ಇದರಿಂದ ಚುನಾವಣೆ ಕೆಲಸಕ್ಕೆ ತೊಂದರೆಯಾಗುತ್ತಿದೆ ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಹೊಸ ಸುತ್ತೋಲೆ ಹೊರಡಿಸಿದೆ. ಸುತ್ತೊಲೆಯಲ್ಲಿರುವ ವಿಷಯ ಯಥಾವತ್ತಾಗಿ ಈ ಕಳೆಗೆ ಇದೆ
*ಯುವತಿ ಮೇಲೆ ಲೈಂಗಿಕ ದೌರ್ಜನ್ಯ! ತೀರ್ಥಹಳ್ಳಿ ಯುವಕನಿಗೆ 10 ವರ್ಷ ಶಿಕ್ಷೆ ,57 ಸಾವಿರ ದಂಡ*
ಕರ್ನಾಟಕ ವಿಧಾನಸಭಾ ಚುನಾವಣೆ 2023 ಯು ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ನೋಂದಣಿ ಪರಿಷ್ಕರಣಾ ಕಾರ್ಯ ಹಾಗೂ ಇತರೆ ಚುನಾವಣೆಗೆ ಸಂಬಂಧಿಸಿದ ಕಾರ್ಯಗಳು ಪ್ರಗತಿಯಲ್ಲಿರುವುದು ಸರಿಯಷ್ಟೆ. ಅದರಂತೆ ತಹಶೀಲ್ದಾರ್, ಉಪ ತಹಶೀಲ್ದಾರ್, ಶಿರಸ್ತೇದಾರ್, ಕಂದಾಯ ನಿರೀಕ್ಷಕರು/ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ನಿಯೋಜನೆ/ಓಓಡಿ ಮತ್ತು ವರ್ಗಾವಣೆ ಮಾಡುವುದರಿಂದ ಚುನಾವಣೆ ಕೆಲಸಕ್ಕೆ ಅಡಚಣೆ ಉಂಟಾಗುತ್ತದೆ.
ಅದರನ್ವಯ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಕಂದಾಯ ಸಚಿವರಿಂದ ಅನುಮೋದನೆಗೊಂಡಿರುವ ವರ್ಗಾವಣೆ ಅಥವಾ ನಿಯೋಜನೆ/ಓಓಡಿ ಪಸ್ತಾವನೆಗಳನ್ನು ಮಾತ್ರ ಸರ್ಕಾರದ ಕಾರ್ಯದರ್ಶಿಯವರಿಗೆ ಕಡತ ಮಂಡಿಸುವುದು. ಬಾಕಿ ವರ್ಗಾವಣೆ ಅಥವಾ ನಿಯೋಜನೆ/ಓಓಡಿ ಪ್ರಸ್ತಾವನೆಗಳನ್ನು ಚುನಾವಣಾ ಕಾರ್ಯ ಮುಗಿಯುವವರೆಗೆ ಅಂದರೆ ಮೇ-2023 ರ ಮಾಹೆಯ ವರೆಗೆ ವಿಲೇ ಇಡುವುದು ಎಂದು ಸರ್ಕಾರದ ಕಂದಾಯ ಇಲಾಖೆ ಕಾರ್ಯದರ್ಶಿ ಸುತ್ತೋಲೆ ಹೊಡೆಸಿದ್ದಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com