KARNATAKA NEWS/ ONLINE / Malenadu today/ May 29, 2023 SHIVAMOGGA NEWS
ಶಿವಮೊಗ್ಗ/ ನಗರ ನೂತನ ಶಾಸಕರ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ , ವೇದಿಕೆಗೆ ಹಾಕಲಾಗಿದ್ದ ಬ್ಯಾನರ್ನಲ್ಲಿ ಬಿಜೆಪಿ ನಾಯಕರ ಸಾಲಿನಲ್ಲಿ ಸಿದ್ದರಾಮಯ್ಯ ಫೊಟೋ ಹಾಕಲಾಗಿತ್ತು. ಈ ಫೋಟೋ ನಿನ್ನೆ ಸಾಕಷ್ಟು ವೈರಲ್ ಆಗಿದ್ದಷ್ಟೆ ಅಲ್ಲದೆ ಕುತೂಹಲ ಮೂಡಿಸಿತ್ತು.
ಬಿಜೆಪಿ ನಾಯಕರೇ ಇದ್ದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಫೋಟೋ ರಾರಾಜಿಸಿದ್ದು ಚರ್ಚೆಗೆ ಗ್ರಾಸವಾಗಿತ್ತು. ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಶಾಸಕ ಚನ್ನಬಸಪ್ಪ, ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯ ಮಂತ್ರಿ. ಹೀಗಾಗಿ ಅವರ ಫೋಟೋವನ್ನು ಹಾಕಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ರಾಜಕಾರಣವೇ ಬೇರೆ, ಗೌರವವೇ ಬೇರೆ. ನಾವು ಮುಖ್ಯ ಮಂತ್ರಿ ಸ್ಥಾನಕ್ಕೆ ಗೌರವ ನೀಡುತ್ತೇವೆ. ಹೀಗಾಗಿ ಅವರ ಫೋಟೋವನ್ನು ಹಾಕಲಾಗಿದೆ. ಬೇರೆ ಯಾವ ಉದ್ದೇಶನೂ ಇಲ್ಲ ಎಂದು ಅವರು ತಿಳಿಸಿದ್ದಾರೆ.