DYSP ಕಚೇರಿ ಆವರಣದಲ್ಲಿ ಕಾಣಿಸಿಕೊಂಡ ನಾಗರಹಾವು!

Cobra spotted in DYSP office premises!

DYSP  ಕಚೇರಿ ಆವರಣದಲ್ಲಿ ಕಾಣಿಸಿಕೊಂಡ ನಾಗರಹಾವು!
Cobra spotted in DYSP office premises!

Shivamogga Feb 24, 2024   ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಡಿವೈಎಸ್​​ಪಿ ಕಚೇರಿ ಆವರಣದಲ್ಲಿ ಹಾವೊಂದು ಕಾಣಿಸಿಕೊಂಡು ಅವಾಂತರಕ್ಕೆ ಕಾರಣವಾಗಿತ್ತು. 

ಭದ್ರಾವತಿ: ನಗರದ ನ್ಯೂಟೌನ್- ಉಂಬೇಬೈಲ್ ರಸ್ತೆಯ ಡಿವೈಎಸ್‌ಪಿ ಕಚೇರಿ ಆವರಣದಲ್ಲಿ  ನಾಗರ ಹಾವೊಂದು ಕಾಣಿಸಿಕೊಂಡಿತ್ತು. 

ಈ ವಿಚಾರ ತಿಳಿದು ಸ್ಥಳಕ್ಕೆ ಬಂದ  ಕಾಗದ ನಗರದ ಯುವಕರಾದ ನಾಗರಾಜ, ಚಂದು, ಗಣೇಶ್ ಹಾವನ್ನ  ಸೆರೆ ಹಿಡಿದು ಎಚ್.ಕೆ.ಜಂಕ್ಷನ್ ಕಾಡಿಗೆ ಬಿಟ್ಟಿದ್ದಾರೆ. 



ಮಾ.03 ರಂದು ಮಕ್ಕಳಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ : ತಹಶೀಲ್ದಾರ್ ಗಿರೀಶ್

ಮಾರ್ಚ್ 3 ರಂದು ಶಿವಮೊಗ್ಗ ತಾಲ್ಲೂಕಿನ ಎಲ್ಲ 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕೆಂದು ತಹಶೀಲ್ದಾರ್ ಗಿರೀಶ್ ತಿಳಿಸಿದರು.ಫೆ.22 ರಂದು ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಶಿವಮೊಗ್ಗ ತಾಲ್ಲೂಕು ಟಾಸ್ಕ್‍ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ 0 ಯಿಂದ 5 ವರ್ಷದೊಳಗಿನ ಒಟ್ಟು 37,829 ಮಕ್ಕಳಿದ್ದಾರೆ. ಗ್ರಾಮಾಂತರದಲ್ಲಿ 17,611 ಮಕ್ಕಳಿದ್ದು 106 ಬೂತ್‍ಗಳಲ್ಲಿ ಹಾಗೂ ನಗರ ಭಾಗದಲ್ಲಿ 20,218 ಮಕ್ಕಳಿದ್ದು 116 ಬೂತ್‍ಗಳಲ್ಲಿ ಪಲ್ಸ್ ಪೊಲೀಯೋ ಹನಿ ಹಾಕಲಾಗುವುದು.

ರಸ್ತೆ ಕೆಲಸ, ಕಲ್ಲು ಕ್ವಾರೆ, ಕುರಿ ಕಾಯುವವರು, ಇಟ್ಟಿಗೆ ಗೂಡು, ವಲಸೆ ಬಂದವರು ಹೀಗೆ ಯಾವುದೇ ಮಕ್ಕಳು ಲಸಿಕೆಯಿಂದ ವಂಚಿತರಾಗದಂತೆ ಎಲ್ಲ 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಈ ಬಗ್ಗೆ ಹೆಚ್ಚಿನ ಪ್ರಚಾರ ಮತ್ತು ಅರಿವು ಮೂಡಿಸಲು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕಸದ ವಾಹನಗಳಲ್ಲಿ, ಧ್ವನಿ ವರ್ಧಕಗಳ ಮುಖಾಂತರ ಜನರಲ್ಲಿ ಅರಿವು ಮಾಡಿಸುವಂತೆ ತಿಳಿಸಿದರು.

 ರಾಷ್ಟ್ರೀಯ ಜಂತು ಹುಳು ನಿವಾರಣೆ ಕಾರ್ಯಕ್ರಮ :

ಫೆ.27 ರಂದು 1 ವರ್ಷದಿಂದ 19 ವರ್ಷದೊಳಗಿನ ಅಂಗನವಾಡಿ, ಶಾಲಾ-ಕಾಲೇಜು, ಹಾಗೂ ಶಾಲೆ ಬಿಟ್ಟ ಮಕ್ಕಳಿಗೆ ಜಂತುಹುಳು ನಿವಾರಣೆ ಮಾತ್ರೆಗಳನ್ನು ಉಚಿತವಾಗಿ ನೀಡಲಾಗುವುದು. ಜಂತುಹುಳು ನಿವಾರಕ ಮಾತ್ರೆ(ಆಲ್ಬೆಂಡಜಾಲ್) ನೀಡುವುದರಿಂದ ಮಕ್ಕಳಲ್ಲಿನ ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಗಟ್ಟಬಹುದಾಗಿದೆ. ಜೊತೆಗೆ ವೈಯಕ್ತಿಕ ಸ್ವಚ್ಚತೆ, ಕೈ ತೊಳೆಯುವ ವಿಧಾನಗಳ ಬಗ್ಗೆ ಅಂಗನವಾಡಿ, ಶಾಲೆಗಳಲ್ಲಿ ಆರೋಗ್ಯ ಶಿಕ್ಷಣ ನೀಡುವಂತೆ ಎಲ್ಲಾ ಆರೋಗ್ಯ ಸಿಬ್ಬಂದಿಗಳಿಗೆ ಸೂಚನೆ ನೀಡಿದರು. ಆಲ್ಬೆಂಡಜಾಲ್ ಮಾತ್ರೆ ವಿತರಣೆ ಮಾಡುವ ಸಮಯದಲ್ಲಿ ಅಂಗನವಾಡಿ ಶಾಲಾ, ಕಾಲೇಜು ಸಿಬ್ಬಂದಿಗಳು ನಿಗಾವಹಿಸಿ ತಮ್ಮ ಎದುರೇ ಮಾತ್ರೆ ನೀಡಬೇಕು ಎಂದರು.

ತಂಬಾಕು ನಿಯಂತ್ರಣ ಕಾರ್ಯಕ್ರಮ: 

 ತಾಲ್ಲೂಕಿನ ಶಾಲಾ ಕಾಲೇಜುಗಳ ಸುತ್ತಮುತ್ತ ನೂರು ಗಜ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳಲ್ಲಿ ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಅವರು ಸೂಚನೆ ನೀಡಿದರು.

ಹಾಗೂ ಕೋಟ್ಪಾ ಕಾಯ್ದೆಯ ಮಾರ್ಗಸೂಚಿಗಳನ್ನು ಪಾಲಿಸದೇ ಇರುವ ಅಂಗಡಿ ಮಾಲೀಕರಿಗೆ ರೂ.100 ರಿಂದ ರೂ.1000 ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಶಾಲಾ, ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಯಂತ್ರಣದ ಬಗ್ಗೆ ಅರಿವು ಮೂಡಿಸುವಂತೆ ತಿಳಿಸಿದರು.

ಆರ್‍ಬಿಎಸ್‍ಕೆ ತಂಡದವರು ಅಂಗನವಾಡಿ ಮತ್ತು ಶಾಲಾ ಮಕ್ಕಳ ಪ್ರಗತಿ ಪರಿಶೀಲನೆ ನಡೆಸಿದ ಅವರು ಮಕ್ಕಳ ಆರೋಗ್ಯ ತಪಾಸಣೆ ನಡೆಸಿದ ನಂತರ ನ್ಯೂನ್ಯತೆಗಳು ಕಂಡುಬಂದಲ್ಲಿ ಮಕ್ಕಳನ್ನು ಮೆಗ್ಗಾನ್ ಆಸ್ಪತೆಯ ಡಿಇಐಸಿ ಕೇಂದ್ರಕ್ಕೆ ಕಳುಹಿಸುವಂತೆ ಸೂಚನೆ ನೀಡಿದರು.

ಕೆಎಫ್‍ಡಿ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ತಾಲ್ಲೂಕಿನಾದ್ಯಂತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಗೂ ಆಶಾ ಕಾರ್ಯಕರ್ತೆಯರ ಕುಂದುಕೊರತೆ ಬಗ್ಗೆ ಆಲಿಸಿದರು.

ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್ ಜಿ.ಬಿ ಮಾತನಾಡಿ, ತಾಲ್ಲೂಕಿನಲ್ಲಿ ಒಟ್ಟು 29 ತಂಬಾಕು ದಾಳಿ ನಡೆಸಿ 405 ಪ್ರಕರಣಗಳಲ್ಲಿ ರೂ.35600 ಗಳನ್ನು ದಂಡ ವಸೂಲಿ ಮಾಡಲಾಗಿದೆ. ತಂಬಾಕು ವ್ಯಸನ ಬಿಡುವವರು ಮೆಗ್ಗಾನ್ ಆಸ್ಪತ್ರೆಯ ರೂಂ ನಂ.19 ರಲ್ಲಿರುವ ವ್ಯಸನ ಮುಕ್ತ ಕೇಂದ್ರಕ್ಕೆ ಭೇಟಿ ನೀಡಬೇಕು ಎಂದರು.    ಸಭೆಯಲ್ಲಿ ಆರೋಗ್ಯ ಇಲಾಖೆ ಮತ್ತು ಇತರೆ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.