ಮೊಬೈಲ್‌ಗೆ ಒಂತು 2 ಮೆಸೇಜ್ : ಒಟಿಪಿ ಹೇಳದೇನೆ ಹೋಯ್ತು ₹5 ಲಕ್ಷ ಹಣ, ಏನಿದು ಪ್ರಕರಣ

This Article Written by / Prathapa thirthahalli / ಜುಲೈ 24, 2025

Protest against forest minister

cyber crime in bhadravati : ಶಿವಮೊಗ್ಗ: ಭದ್ರಾವತಿಯ ನಿವಾಸಿಯೊಬ್ಬರ ಬ್ಯಾಂಕ್ ಖಾತೆಯಿಂದ ಸೈಬರ್ ಖದೀಮರು ಬರೋಬ್ಬರಿ 5.70 ಲಕ್ಷ ರೂಪಾಯಿ ದೋಚಿರುವ ಘಟನೆ ನಡೆದಿದೆ. ಮೊಬೈಲ್‌ಗೆ ಬಂದ ಕೇವಲ ಎರಡು ಮೆಸೇಜ್‌ಗಳ ಮೂಲಕ ಓಟಿಪಿ ಕೇಳದೆಯೇ ಹಣ ಕಳುಹಿಸಿಕೊಂಡಿದ್ದು, ಈ ಬಗ್ಗೆ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

cyber crime in bhadravati ಘಟನೆ ನಡೆದಿದ್ದು ಹೇಗೆ?

ಭದ್ರಾವತಿಯ ಸಾದತ್ ಕಾಲೋನಿಯ ವ್ಯಕ್ತಿಯೊಬ್ಬರ ಫೋನ್​ಗೆ ಎರಡು ಟೆಕ್ಸ್ಟ್​ ಮೇಸೇಜ್​ ಬಂದಿದ್ದವು. ಅದು hdfc ಬ್ಯಾಂಕ್​ ನ ಮೆಸೇಜ್​ ಆಗಿದ್ದು ಅದನ್ನು ದೂರುದಾರರು ಓಪನ್​  ಮಾಡಿದಾಗ ಅವರಿಗೊಂದು ಶಾಕ್​ ಎದುರಾಗಿತ್ತು. ಅದೇನೆಂದರೆ ಅವರ ಬ್ಯಾಂಕ್​ನಿಂದ  5 ,70,000 ರೂಪಾಯಿ ಹಣ ಡೆಬಿಟ್ ಆಗಿತ್ತು. ಆದರೆ ಯಾರಿಗೂ ಹಣ ಹಾಕದ ದೂರುದಾರರು ಗಾಬರಿಯಿಂದ ಬ್ಯಾಂಕ್​ನಲ್ಲಿ ಹೋಗಿ ವಿಚಾರಿಸಿದಾಗಲೂ ಸಹ ಬ್ಯಾಂಕ್​ ಸಿಬ್ಬಂದಿ ನಿಮ್ಮ ಖಾತೆಯಿಂದ ಹಣ ಕಟ್​ ಆಗಿದೆ ಎಂದು ಹೇಳಿದ್ದರು.

ಇದರಿಂದ ದೂರುದಾರರಿಗೆ ಯಾರೋ ತಮ್ಮ ವ್ಯಯಕ್ತಿಕ ಖಾತೆಯನ್ನು ಹ್ಯಾಕ್​ ಮಾಡಿ ಮೊಬೈಲ್​ಗೆ ಒಟಿಪಿಯನ್ನೂ ಕಳುಹಿಸದೆ ಹಂತ ಹಂತವಾಗಿ ಹಣವನ್ನು  ವರ್ಗಾಯಿಸಿಕೊಂಡಿರುವುದು ತಿಳಿದು ಬಂದಿದೆ.

 

malenadu today
malenadu today

 

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಂದಿನ ಸುದ್ದಿ ಒದಿ

Leave a Comment