SHIVAMOGGA NEWS TODAY

ಮೊಬೈಲ್‌ಗೆ ಒಂತು 2 ಮೆಸೇಜ್ : ಒಟಿಪಿ ಹೇಳದೇನೆ ಹೋಯ್ತು ₹5 ಲಕ್ಷ ಹಣ, ಏನಿದು ಪ್ರಕರಣ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

cyber crime in bhadravati : ಶಿವಮೊಗ್ಗ: ಭದ್ರಾವತಿಯ ನಿವಾಸಿಯೊಬ್ಬರ ಬ್ಯಾಂಕ್ ಖಾತೆಯಿಂದ ಸೈಬರ್ ಖದೀಮರು ಬರೋಬ್ಬರಿ 5.70 ಲಕ್ಷ ರೂಪಾಯಿ ದೋಚಿರುವ ಘಟನೆ ನಡೆದಿದೆ. ಮೊಬೈಲ್‌ಗೆ ಬಂದ ಕೇವಲ ಎರಡು ಮೆಸೇಜ್‌ಗಳ ಮೂಲಕ ಓಟಿಪಿ ಕೇಳದೆಯೇ ಹಣ ಕಳುಹಿಸಿಕೊಂಡಿದ್ದು, ಈ ಬಗ್ಗೆ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

cyber crime in bhadravati ಘಟನೆ ನಡೆದಿದ್ದು ಹೇಗೆ?

ಭದ್ರಾವತಿಯ ಸಾದತ್ ಕಾಲೋನಿಯ ವ್ಯಕ್ತಿಯೊಬ್ಬರ ಫೋನ್​ಗೆ ಎರಡು ಟೆಕ್ಸ್ಟ್​ ಮೇಸೇಜ್​ ಬಂದಿದ್ದವು. ಅದು hdfc ಬ್ಯಾಂಕ್​ ನ ಮೆಸೇಜ್​ ಆಗಿದ್ದು ಅದನ್ನು ದೂರುದಾರರು ಓಪನ್​  ಮಾಡಿದಾಗ ಅವರಿಗೊಂದು ಶಾಕ್​ ಎದುರಾಗಿತ್ತು. ಅದೇನೆಂದರೆ ಅವರ ಬ್ಯಾಂಕ್​ನಿಂದ  5 ,70,000 ರೂಪಾಯಿ ಹಣ ಡೆಬಿಟ್ ಆಗಿತ್ತು. ಆದರೆ ಯಾರಿಗೂ ಹಣ ಹಾಕದ ದೂರುದಾರರು ಗಾಬರಿಯಿಂದ ಬ್ಯಾಂಕ್​ನಲ್ಲಿ ಹೋಗಿ ವಿಚಾರಿಸಿದಾಗಲೂ ಸಹ ಬ್ಯಾಂಕ್​ ಸಿಬ್ಬಂದಿ ನಿಮ್ಮ ಖಾತೆಯಿಂದ ಹಣ ಕಟ್​ ಆಗಿದೆ ಎಂದು ಹೇಳಿದ್ದರು.

ಇದರಿಂದ ದೂರುದಾರರಿಗೆ ಯಾರೋ ತಮ್ಮ ವ್ಯಯಕ್ತಿಕ ಖಾತೆಯನ್ನು ಹ್ಯಾಕ್​ ಮಾಡಿ ಮೊಬೈಲ್​ಗೆ ಒಟಿಪಿಯನ್ನೂ ಕಳುಹಿಸದೆ ಹಂತ ಹಂತವಾಗಿ ಹಣವನ್ನು  ವರ್ಗಾಯಿಸಿಕೊಂಡಿರುವುದು ತಿಳಿದು ಬಂದಿದೆ.

 

malenadu today
malenadu today

 

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.