Darshan bail :  ನಟ ದರ್ಶನ್​ ಬೇಲ್​ ರದ್ದುಗೊಳಿಸಿದ ಸುಪ್ರೀಂ ಕೋರ್ಟ್​

ಹಂಚಿಕೊಳ್ಳಿ
WhatsApp Facebook X Telegram
Actor darshan
Actor darshan

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ರವರಿಗೆ ನೀಡಿದ್ದ ಹೈಕೊರ್ಟ್​  ಬೇಲ್​ನನ್ನು ಇಂದು ಸುಪ್ರೀಂ ಕೋರ್ಟ್​ ರದ್ದು ಗೊಳಿಸಿದೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಆರ್. ಮಹಾದೇವನ್ ಅವರ ಪೀಠ ಈ ಆದೇಶವನ್ನು ಹೊರಡಿಸಿದೆ.  ನ್ಯಾಯಮೂರ್ತಿ ಮಹಾದೇವನ್ ಅವರು ಆದೇಶದಲ್ಲಿ, “ಜಾಮೀನು ಮಂಜೂರು ಮತ್ತು ರದ್ದತಿ ಎರಡನ್ನೂ ನಾವು ಪರಿಗಣಿಸಿದ್ದೇವೆ, ಮತ್ತು ಹೈಕೋರ್ಟ್ ಆದೇಶವು ಯಾಂತ್ರಿಕವಾಗಿ ಅಧಿಕಾರವನ್ನು ಚಲಾಯಿಸಿದೆ ಎಂಬುದು ಸ್ಪಷ್ಟವಾಗಿದೆ. ಜಾಮೀನು ನೀಡಿದರೆ ವಿಚಾರಣೆಯ ಮೇಲೆ ಪರಿಣಾಮ ಬೀರಬಹುದು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು” ಎಂದು ಹೇಳಿದರು.

ದರ್ಶನ್​ರವರಿಗೆ ಅಷ್ಟೇ ಅಲ್ಲದೆ ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಪವಿತ್ರಾ ಗೌಡ ಸೇರಿದಂತೆ 7 ಜನರ ಬೇಲನ್ನು ಸಹ ರದ್ದುಗೊಳಿಸಲಾಗಿದೆ. 

Darshan bail

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor