SHIMOGA NEWS LIVE

ದನ, ಒಂಟೆ ಸಾಗಿಸುವಂತಿಲ್ಲ, ಕಡಿಯವಂತಿಲ್ಲ : ಡಿಸಿ ಆರ್ಡರ್​! ಅಕ್ರಮ ಪತ್ತೆಗೆ 32 ಚೆಕ್ ಪೋಸ್ಟ್ ಓಪನ್​

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ : ಜಿಲ್ಲೆಯಲ್ಲಿ ಬಿಡಾಡಿ ಗೋವುಗಳನ್ನು ಗುರುತಿಸಿ ಗೋಶಾಲೆಗೆ ಕಳುಹಿಸಬೇಕು. ಹಾಗೂ ಕಾನೂನು ಬಾಹಿರವಾಗಿ ಪ್ರಾಣಿಗಳ ಸಾಗಾಣಿಕೆ ಮಾಡುವುದು ಮತ್ತು ವಧೆಯನ್ನು‌ ಕಟ್ಟುನಿಟ್ಟಾಗಿ ತಡೆಗಟ್ಟಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಸೂಚನೆ ನೀಡಿದರು.

ದನ, ಒಂಟೆ ಸಾಗಿಸುವಂತಿಲ್ಲ, ಕಡಿಯವಂತಿಲ್ಲ : ಡಿಸಿ ಆರ್ಡರ್​!

ಮೇ 28ರಂದು ರಾಜ್ಯಾದ್ಯಂತ ಬಕ್ರೀದ್ ಹಬ್ಬ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಕಾನೂನುಬಾಹಿರವಾಗಿ ಹಾಗೂ ಅಕ್ರಮ ಪ್ರಾಣಿ ಸಾಗಣೆ ಮತ್ತು ವಧೆಗೆ ಕಾನೂನುಬದ್ಧವಾಗಿ ನಿಯಂತ್ರಣ ಹಾಕಲು ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಚರ್ಚಿಸಲು ಬುಧವಾರ ಜಿಲ್ಲಾಡಳಿತ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಕ್ರಮವಾಗಿ ಒಂಟೆ ಮತ್ತು ಗೋವುಗಳನ್ನು ಸಾಗಿಸುವುದು ಮತ್ತು ವಧೆ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅನಧಿಕೃತ ಪ್ರಾಣಿಗಳ ಸಾಗಾಣಿಕೆ ಮತ್ತು ವಧೆ ನಿಯಂತ್ರಣ ಸಮಿತಿಯನ್ನು ರಚಿಸಲಾಗಿದ್ದು, ಈ‌ನಿಟ್ಟಿನಲ್ಲಿ ಸಮಿತಿ ಸದಸ್ಯರು ಯಾವುದೇ ರೀತಿಯಲ್ಲಿ ನಿರ್ಲಕ್ಷ್ಯ ವಹಿಸದೇ ಕ್ರಮ ವಹಿಸಬೇಕೆಂದರು.

ಪ್ರಾಣಿಗಳ ಅಕ್ರಮ ಸಾಗಾಣಿಕೆ ಬಗ್ಗೆ ಚೆಕ್ ಪೋಸ್ಟ್ ಗಳಲ್ಲಿ ತೀವ್ರ ನಿಗಾ ವಹಿಸಬೇಕು. ಹಾಗೂ ಬಿಡಾಡಿ ಗೋವುಗಳು ಹಾಗೂ ಮಾಲೀಕರಿಲ್ಲದ ಗೋವುಗಳನ್ನು ಗುರುತಿಸಿ, ಅಂತಹ ಗೋವುಗಳನ್ನು ಸಮೀಪದ ಗೋಶಾಲೆಗಳಿಗೆ ಕಳುಸಹಿಸಿಕೊಡಬೇಕು. ಅಕ್ರಮ ಪ್ರಾಣಿ ವಧೆ ಕಂಡು ಬಂದಲ್ಲಿ ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯ ಅಧಿಕಾರಿಗಳು ದೃಢೀಕರಿಸಬೇಕು ಎಂದು ತಿಳಿಸಿದರು.

ಅಕ್ರಮ ಪತ್ತೆಗೆ 32 ಚೆಕ್ ಪೋಸ್ಟ್ ಓಪನ್​

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ‌ ಮಾತನಾಡಿ, ಜಿಲ್ಲೆಯಲ್ಲಿ‌ ಈಗಾಗಲೇ 32 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿ, ಸಿಬ್ಬಂದಿ ನಿಯೋಜನೆ ಮಾಡಿ‌ ಅಕ್ರಮ ಪ್ರಾಣಿಗಳ ಸಾಗಾಣಿಕೆ ಕುರಿತು ನಿಗಾ ವಹಿಸಲಾಗುತ್ತಿದೆ. ಬಿಡಾಡಿ ಗೋವುಗಳ ಸಮಸ್ಯೆ ಕುರಿತು ಪೊಲೀಸ್ ಇಲಾಖೆ ಮಹಾನಗರ ಪಾಲಿಕೆ ಜೊತೆ ಸೇರಿ‌ ಕ್ರಮ‌ ಕೈಗೊಳ್ಳಲಿದೆ ಎಂದರು.

ಎಡಿಸಿ ಅಭಿಷೇಕ್ ವಿ, ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಮಾಯಣ್ಣಗೌಡ, ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ