ಶಿವಮೊಗ್ಗದ ನೆಂಟರ ಮನೆಗೆ ಬಂದಿದ್ದ ಕುಂದಾಪುರದ ಇಬ್ಬರು ಬಾಲಕರ ಸಾವು | ಭದ್ರಾ ಚಾನಲ್‌ನಲ್ಲಿ ದುರಂತ |

The death of two boys from Kundapur who had come to the house of a relative in Shimoga Tragedy in Bhadra Channel |

ಶಿವಮೊಗ್ಗದ ನೆಂಟರ ಮನೆಗೆ ಬಂದಿದ್ದ ಕುಂದಾಪುರದ ಇಬ್ಬರು ಬಾಲಕರ ಸಾವು | ಭದ್ರಾ ಚಾನಲ್‌ನಲ್ಲಿ ದುರಂತ |
Kundapur, Shimoga Tragedy , Bhadra Channel

SHIVAMOGGA | MALENADUTODAY NEWS | Apr 23, 2024  

ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಚಾನಲ್‌ ಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ವೇಳೆ ಹೀಗಾಗಿದೆ ಎಂದು ತಿಳಿದು ಬಂದಿದೆ.   

ನಡೆದಿದ್ದೇನು?

ಹೊಳೆಹೊನ್ನೂರು  ಸಮೀಪದ ಗುಡಮಗಟ್ಟೆಯಲ್ಲಿರುವ ಭದ್ರಾ ಚಾನಲ್‌ ನಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ರಜತ್‌ ಹಾಗೂ ರೋಹನ್‌ ಎಂದು ಗುರುತಿಸಲಾಗಿದೆ. 15 ವರ್ಷ ಹಾಗೂ 10 ವರ್ಷದ ಬಾಲಕರಿಬ್ಬರು ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದರು. ನಿನ್ನೆ ಸಂಜೆ ಮೂರುವರೆ ನಾಲ್ಕು ಗಂಟೆ ಸುಮಾರಿಗೆ ಇಬ್ಬರು ಭದ್ರಾ ಚಾನಲ್‌ ಬಳಿ ಬಂದಿದ್ದಾರೆ. ಚಾನಲ್‌ ಏರಿ ಮೇಲೆ ಬಂದ ಇಬ್ಬರು ಬಾಲಕರ ಪೈಕಿ ಚಿಕ್ಕವನು ನೀರಿಗಿಳಿದಿದ್ದಾನೆ. ಆದರೆ ನೀರಿನ ಸೆಲೆಯಲ್ಲಿ ಆತ ಈಜಲಾಗದೇ ಮುಳಗಲು ಆರಂಭಿಸಿದ್ದಾನೆ. ಆತನನ್ನು ರಕ್ಷಿಸಲು ಇನ್ನೊಬ್ಬನು ನೀರಿಗಿಳಿದಿದ್ದು, ಆತನೂ ಸಹ ಚಾನಲ್‌ನಲ್ಲಿ ಮುಳುಗಿದ್ದಾನೆ. ವಿಷಯ ತಿಳಿಯುತ್ತಲೇ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್‌ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಸ್ಥಳದಲ್ಲಿ ಬಟ್ಟೆ ಮಾತ್ರ ಪತ್ತೆಯಾಗಿದ್ದರಿಂದ ಪ್ರಕರಣ ಅನುಮಾನ ಸಹ ಮೂಡಿಸಿತ್ತು. ಆನಂತರ ರಾತ್ರಿ 9.30 ರ ಸುಮಾರಿಗೆ ಇಬ್ಬರು ಬಾಲಕರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶವ ಮಹಜರ್‌ ನಡೆಸಿ ಪೋಷಕರಿಗೆ ಬಾಲಕರ ಮೃತದೇಹವನ್ನು ಒಪ್ಪಿಸಿದ್ದಾರೆ.