ಉಜಿರೆ: ವರದಕ್ಷಿಣೆ ಮತ್ತು ಮದುವೆಯ ದುಂದುವೆಚ್ಚವನ್ನು ತಡೆಯುವ ಉದಾತ್ತ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವು ಇದೀಗ 54ನೇ ವರ್ಷಕ್ಕೆ ಕಾಲಿಟ್ಟಿದೆ. 2026ರ ಏಪ್ರಿಲ್ 29ರಂದು ಸಂಜೆ 6:40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಈ ವಿವಾಹ ಮಹೋತ್ಸವವು ಶ್ರೀ ಕ್ಷೇತ್ರದಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಲಿದೆ.
ಜಿಲ್ಲೆಯಲ್ಲಿ ಗಾಂಜಾ ವ್ಯಸನಿಗಳ ವಿರುದ್ಧ ಪೊಲೀಸ್ ಬೇಟೆ, 2 ತಿಂಗಳಲ್ಲಿ ದಾಖಲಾದ ಪ್ರಕರಣಗಳೆಷ್ಟು ಗೊತ್ತಾ…
dharmasthala ಈ ಯೋಜನೆಯಡಿ ಮದುವೆಯಾಗುವ ವಧುವಿಗೆ ಸೀರೆ, ರವಿಕೆಕಣ ಮತ್ತು ಮಂಗಳಸೂತ್ರ ಹಾಗೂ ವರನಿಗೆ ಧೋತಿ ಮತ್ತು ಶಾಲನ್ನು ನೀಡಲಾಗುತ್ತದೆ. ವಿವಾಹದ ಸಂಪೂರ್ಣ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು. ಈ ಸಾಮೂಹಿಕ ವಿವಾಹದಲ್ಲಿ ಕೇವಲ ಮೊದಲ ವಿವಾಹಕ್ಕೆ ಮಾತ್ರ ಅವಕಾಶವಿದ್ದು, ಎರಡನೇ ಮದುವೆಗೆ ಅವಕಾಶವಿರುವುದಿಲ್ಲ. ಈವರೆಗೆ ಸುಮಾರು 13,000ಕ್ಕೂ ಹೆಚ್ಚು ಜೋಡಿಗಳು ಈ ಯೋಜನೆಯ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸುಖ-ಶಾಂತಿಯಿಂದ ಜೀವನ ನಡೆಸುತ್ತಿದ್ದಾರೆ.
ಸಾಮೂಹಿಕ ವಿವಾಹದಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತರು 2026ರ ಏಪ್ರಿಲ್ 25ರೊಳಗೆ ಸವಿವರ ಮಾಹಿತಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕೆಂದು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ದೂರವಾಣಿ ಸಂಖ್ಯೆ 08256-266644 ಅಥವಾ ವಾಟ್ಸಪ್ ಸಂಖ್ಯೆಗಳಾದ 9663464648 ಮತ್ತು 8147263422 ಅನ್ನು ಸಂಪರ್ಕಿಸಬಹುದಾಗಿದೆ,
Dharmasthala 54th Year Free Mass Marriage
