ಮಾಸ್ಕ್​ ಮ್ಯಾನ್​ ಚಿನ್ನಯ್ಯ ಶಿವಮೊಗ್ಗ ಕೇಂದ್ರ ಕಾರಗೃಹಕ್ಕೆ…?

ಹಂಚಿಕೊಳ್ಳಿ
WhatsApp Facebook X Telegram
Mask man chinnayya Mask man interview
Mask man chinnayya Mask man interview

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿ ಎಸ್‌ಐಟಿ ತನಿಖೆಗೆ ಒಳಪಟ್ಟಿದ್ದ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ಅವರನ್ನು ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಭದ್ರತಾ ದೃಷ್ಟಿಯಿಂದ ಚಿನ್ನಯ್ಯ ಅವರನ್ನು ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಇರಿಸುವಂತೆ ನ್ಯಾಯಾಲಯವು ಸೂಚಿಸಿದೆ.

ಚಿನ್ನಯ್ಯ ಅವರನ್ನು ಈ ಹಿಂದೆ 15 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ಒಳಪಡಿಸಲಾಗಿತ್ತು. ಈ ಅವಧಿಯಲ್ಲಿ, ಅವರ ಹೇಳಿಕೆಗಳ ಆಧಾರದ ಮೇಲೆ ಎಸ್‌ಐಟಿ ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ., ಯೂಟ್ಯೂಬರ್ ಅಭಿಷೇಕ್ ಮತ್ತು ಸೌಜನ್ಯ ಅವರ ಚಿಕ್ಕಪ್ಪ ವಿಠಲ್ ಗೌಡ ಸೇರಿದಂತೆ ಹಲವು ಜನರನ್ನು ವಿಚಾರಣೆಗೆ ಒಳಪಡಿಸಿದ್ದರು.

Mask man interviewDharmasthala Mask Man Channayya Sent to Judicial Custody
Mask man interviewDharmasthala Mask Man Channayya Sent to Judicial Custody

ಸೆಪ್ಟೆಂಬರ್ 6ರಂದು ಮಧ್ಯಾಹ್ನ 3.10 ಕ್ಕೆ ಎಸ್‌ಐಟಿ ಚಿನ್ನಯ್ಯನ್ನು  ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ವಿಜಯೇಂದ್ರ ಹೆಚ್.ಟಿ. ಅವರ ಮುಂದೆ ಹಾಜರುಪಡಿಸಲಾಯಿತು. ಸರ್ಕಾರಿ ಅಭಿಯೋಜಕರು ಎಸ್‌ಐಟಿಯನ್ನು ಪ್ರತಿನಿಧಿಸಿದರೆ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ನೇಮಕಗೊಂಡ ಮಂಗಳೂರಿನ ಮೂವರು ವಕೀಲರು ಚಿನ್ನಯ್ಯ ಪರವಾಗಿ ವಾದ ಮಂಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯವು ಚಿನ್ನಯ್ಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಭದ್ರತಾ ಕಾರಣಗಳಿಗಾಗಿ ಅವರನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ಆದೇಶ ನೀಡಿದೆ ಎಂದು ತಿಳಿದುಬಂದಿದೆ.

Dharmasthala Mask Man Channayya Sent to Judicial Custody

car decor new

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor