SSLC ಶಿವಮೊಗ್ಗದಲ್ಲಿ 624 ಅಂಕ ತೆಗೆದವರು ಯಾರು ಗೊತ್ತಾ? ಜಿಲ್ಲೆಯ Rank ಕುಸಿಯಲು ಕಾರಣ ಏನು? ಯಾವ ತಾಲ್ಲೂಕಿನಲ್ಲಿದೆ ಕಡಿಮೆ ಫಲಿತಾಂಶ?

KARNATAKA NEWS/ ONLINE / Malenadu today/ May 7, 2023 GOOGLE NEWS 

ತೀರ್ಥಹಳ್ಳಿ/ ಶಿವಮೊಗ್ಗ ಇಲ್ಲಿನ ಚಿಟ್ಟೆಬೈಲಿನಲ್ಲಿರುವ ಪ್ರಜ್ಞಾಭಾರತಿ ಆಂಗ್ಲ‌ ಮಾಧ್ಯಮ ಶಾಲೆಯ ವಿದ್ಯಾರ್ಥಿ ಎಚ್.ಎಸ್.ಅಮಿತ್ ಶಾಸ್ತ್ರಿ 624 ಅಂಕ ಗಳಿಸಿದ್ದಾರೆ.

MISSING /  ಇವರಿಬ್ಬರನ್ನ ಎಲ್ಲಾದರೂ ಕಂಡೀದ್ದೀರಾ? ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ

ಇವರು ಶಿವಪ್ರಸಾದ್ ಮತ್ತು ವೀಣಾ ಅವರ ಪುತ್ರರಾಗಿದ್ದಾರೆ. ತಂದೆ ತಾಯಿ ಇಬ್ಬರು ಶಿಕ್ಷಕರಾಗಿದ್ದಾರೆ.  ಇನ್ನೂ  ಬೆಂಗಳೂರಿನ ಹೊಸೂರು‌ ರಸ್ತೆಯಲ್ಲಿರುವ ನ್ಯೂ ಮೆಕಾಲೆ ಇಂಗ್ಲಿಷ್ ಶಾಲೆಯ ಭೂವಿಕಾ ಪೈ, ಚಿಕ್ಕಬಳ್ಳಾಪುರದ ಬಾಲಗಂಗಾಧರನಾಥ ಶಾಲೆಯ ಯಶಸ್ ಗೌಡ, ಸವದತ್ತಿಯ ಕುಮಾರೇಶ್ವರ ಶಾಲೆಯ ಅನುಪಮಾ ಶ್ರೀಶೈಲ್, ಮುದ್ದೇಬಿಹಾಳದ ಆಕ್ಸ್ ಫರ್ಡ್ ಇಂಗ್ಲೀಷ್ ಶಾಲೆಯ ಭೀಮನಗೌಡ ಹನುಮಂತಗೌಡ ಪಾಟೀಲ್ 625 ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.

ಮಲೆನಾಡಿನಲ್ಲಿ ಕಮ್ಮಿಯಾಯ್ತು ಸ್ಕೋರ್​!?

ಇನ್ನೂ ಈ ಸಲ  ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಶಿವಮೊಗ್ಗ  29 ನೇ ಸ್ಥಾನ ಪಡೆದುಕೊಂಡಿದೆ.  ಯಾವಾಗಲು 15 ರೊಳಗೆ ಇರುತ್ತಿದ್ದ ಸ್ಥಾನ ಈ ಸಲ ಮತ್ತಷ್ಟು ಕುಸಿದಿದ್ದು, ಜಿಲ್ಲೆಯಲ್ಲಿ ಶಿಕ್ಷಣದ ಗುಣಮಟ್ಟದ ಬಗ್ಗೆ ಚಿಂತನೆ ಮಾಡಬೇಕಾದ ಪ್ರಶ್ನೆ ಮೂಡಿದೆ. 

MISSING /  ಇವರಿಬ್ಬರನ್ನ ಎಲ್ಲಾದರೂ ಕಂಡೀದ್ದೀರಾ? ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ 

ಭದ್ರಾವತಿ ಮತ್ತು ಶಿಕಾರಿಪುರ ತಾಲೂಕಿನ ಫಲಿತಾಂಶಗಳಲ್ಲಿ ಗಣನೀಯವಾಗಿ ಇಳಿಮುಖವಾಗಿದೆ,  ಭದ್ರಾವತಿಯಲ್ಲಿ ಶೇ. 75ರಷ್ಟು ಫಲಿತಾಂಶ ಹೊರಬಿದ್ದಿದೆ. ಇನ್ನೂ ಸ್ಥಾನ ಶಿಕಾರಿಪುರ ತಾಲೂಕಿನಲ್ಲಿ, ಶೇ. 81ರಷ್ಟು, ಶಿವಮೊಗ್ಗ ಸಾಗರ-85, ಸೊರಬ-86, ತೀರ್ಥಹಳ್ಳಿ ಮತ್ತು ಹೊಸನಗರ-91 ರಷ್ಟು ಫಲಿತಾಂಶ ಬಂದಿದೆ. 

ಭದ್ರಾವತಿಯ ಉರ್ದು ಶಾಲೆಯೊಂದರಲ್ಲಿ 152 ಮಕ್ಕಳು ಎಸ್ ಎಸ್ ಎಲ್‌ ಸಿ ಪರೀಕ್ಷೆ ಬರೆದಿದ್ದು, ಆ ಪೈಕಿ 56 ಮಕ್ಕಳು ಕನ್ನಡ ವಿಷಯದಲ್ಲಿ ಅನುತ್ತೀರ್ಣರಾಗಿದ್ದಾರೆ. ವಿಶೇಷ ಅಂದರೆ,  71 ಶಾಲೆಗಳಲ್ಲಿ ನೂರರಷ್ಟು ಸಾಧನೆಯಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಒಟ್ಟಾರೆ ಶೇ.83.29 ಫಲಿತಾಂಶ ಜಿಲ್ಲೆಗೆ ಲಭಿಸಿದೆ. ಒಟ್ಟು 355 ವಿದ್ಯಾರ್ಥಿಗಳು 600 ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ. ಇದರಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 142, ಭದ್ರಾವತಿ-51, ಹೊಸನಗರ-23, ಸಾಗರ-45, ಶಿಕಾರಿಪುರ-42, ಸೊರಬ-14 ಹಾಗೂ ತೀರ್ಥಹಳ್ಳಿಯ 38 ವಿದ್ಯಾರ್ಥಿಗಳು ಸೇರಿದ್ದಾರೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 21,347 ವಿದ್ಯಾರ್ಥಿಗಳು ಹಾಜರಾಗಿದ್ದರು.

ಈ ಪೈಕಿ 17,779 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಶೇ.91.08 ಫಲಿತಾಂಶದೊಂದಿಗೆ ಅಗ್ರ ಸ್ಥಾನ ಪಡೆದುಕೊಂಡಿದೆ. ಇನ್ನುಳಿದಂತೆ ಹೊಸನಗರ-ಶೇ.90.70, ಸಾಗರ-86.12, ಸೊರಬ-84.25, ಶಿವಮೊಗ್ಗ-84.06, ಶಿಕಾರಿಪುರ-81.20 ಹಾಗೂ ‘ದ್ರಾವತಿ ಶೇ. 75.38ರಷ್ಟು ಫಲಿತಾಂಶ ಪಡೆದುಕೊಂಡಿವೆ.

KIng cobra / ಮಾರುತಿ ವ್ಯಾನ್​ನಲ್ಲಿದ್ದ ಕಾಳಿಂಗ ಸರ್ಪ!/ ಆಗುಂಬೆಯ ಈ ದೃಶ್ಯ ಸೋಶಿಯಲ್​ ಮೀಡಿಯಾದಲ್ಲಿ ಆಗ್ತಿದೆ ವೈರಲ್

ಬೆಂಗಳೂರು/ ಇದು ವೈರಲ್ ಯುಗ, ಈಗಿನ ಟ್ರೆಂಡ್​ನಲ್ಲಿ ಯಾವುದೋ ಹಳೆಯ ವಿಡಿಯೋಗಳೆಲ್ಲಾ ಒಂದೇ ಸಲಕ್ಕೆ ಹೊಸ ಹೊಸ ವೀವ್ಸ್  ಪಡೆದುಕೊಳ್ಳಲು ಆರಂಭಿಸುತ್ತದೆ. ಸದ್ಯ ಮಾರುತಿ ವ್ಯಾನ್​ನಲ್ಲಿದ್ದ ಕಾಳಿಂಗವನ್ನು ಹಿಡಿಯುತ್ತಿರುವ ದೃಶ್ಯವೊಂದು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. 

MISSING /  ಇವರಿಬ್ಬರನ್ನ ಎಲ್ಲಾದರೂ ಕಂಡೀದ್ದೀರಾ? ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ 

ವಿಡಿಯೋವನ್ನು  ಭಾರತೀಯ ಅರಣ್ಯಸೇವೆಯ ಅಧಿಕಾರಿ ಸುಶಾಂತ್ ನಂದಾ ರವರ ಟ್ವಿಟ್ಟರ್‌ನಲ್ಲಿ ಮೊದಲು ಪೋಸ್ಟ್ ಆಗಿದ್ದು ಆನಂತರ ಎಲ್ಲೆಡೆ ವೈರಲ್​ ಆಗಿದೆ. ವಿಶೇಷ ಅಂದರೆ, ಈ ವಿಡಿಯೋ ದೃಶ್ಯ ಶಿವಮೊಗ್ಗ ಜಿಲ್ಲೆ ಆಗುಂಬೆಯದ್ದಾಗಿದೆ

15 ಅಡಿ ಉದ್ದ ಬೃಹತ್ ಗಾತ್ರದ ನಾಗರ ಹಾವನ್ನು ಹಾವು ಹಿಡಿಯುವ ತಜ್ಞ ಎಸ್ ಎಸ್​ ಜಯಕುಮಾರ್​, ರಕ್ಷಣೆ ಮಾಡಿ ಕಾಡಿಗೆ ಬಿಡುತ್ತಿರುವ ವಿಡಿಯೋವನ್ನ ಸುಶಾಂತ್ ನಂದಾ ಹಂಚಿಕೊಂಡಿದ್ದು, ಸದ್ಯ ದೃಶ್ಯ ವೈರಲ್​ ಆಗಿದೆ. 

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ/ ಇಬ್ಬರ ದುರ್ಮರಣ

11 ತಿಂಗಳ ನಂತರ ಮತ್ತೆ ವೈರಲ್​ 

ಹೋದ ವರ್ಷ  ಶಿವಮೊಗ್ಗದ (Shivamogga) ಆಗುಂಬೆ (Agumbe) ಯಲ್ಲಿನ ನಿವಾಸಿಯೊಬ್ಬರ ಮನೆಯಲ್ಲಿ ಕಾಳಿಂಗ ವೊಂದು ಕಾಣಿಸಿಕೊಂಡಿತ್ತು. ಅವರ ಮನೆಯ ಮಾರುತಿ ವ್ಯಾನ್​ನಲ್ಲಿ ಹಾವು ಹರಿದಾಡುತ್ತಿತ್ತು. ಇದನ್ನ ನೋಡಿ ಮನೆಯವರು ಹಾವು ಹಿಡಿಯುವ ತಜ್ಞರಿಗೆ ವಿಷಯ ತಿಳಿಸಿದ್ದಾರೆ. ವಾಹನದಲ್ಲಿ ಕಾಳಿಂಗ ಇದೆ ಎಂಬುದನ್ನ ಕೇಳಿ ಎಸ್​ಎಸ್ ಜಯಕುಮಾರ್ ತಮ್ಮ ತಂಡದೊಂದಿಗೆ ಸ್ಥಳಕ್ಕೆ ಬಂದಿದ್ಧಾರೆ.  ಅಂದಹಾಗೆ, ದೇಶದಲ್ಲಿ ಹಾವುಗಳ ಸಂರಕ್ಷಣೆಯಲ್ಲಿ ತೊಡಗಿರುವ ತಜ್ಞರ ಪೈಕಿ ಜಯಕುಮಾರ್​ ಕೂಡ ಒಬ್ಬರು

ವಿಶೇಷ ಗಮನ ಹರಿಸಿ,  ಕಾಳಿಂಗ ಸರ್ಪ King cobra (Ophiophagus hannah) ವನ್ನು ಹೊರತೆಗೆದು ಹಿಡಿದು ಅದನ್ನ ಚೀಲಕ್ಕೆ ತುಂಬಿಸಿ ನಂತರ ಕಾಡಿಗೆ ಬಿಟ್ಟಿದ್ದಾರೆ. ಆನಂತರ ಈ ದೃಶ್ಯವನ್ನು ಅವರು  ಯೂಟ್ಯೂಬ್​ ಚಾನಲ್​ Living Zoology  ನಲ್ಲಿ ಅಪ್​ಲೋಡ್ ಮಾಡಿದ್ದರು. ಈ ವಿಡಿಯೋ ಇದೀಗ ಸುಶಾಂತ್ ಟ್ವೀಟ್​ನೊಂದಿಗೆ ಮತ್ತೆ ವೈರಲ್​ ಆಗಿದೆ. 

ಕ್ಷಿಪ್ರ ಕಾರ್ಯಾಚರಣೆ/  ಶಿವಮೊಗ್ಗದ ಇಬ್ಬರು ಸೇರಿದಂತೆ ರಾಜ್ಯ ನಾಲ್ವರು ವಿದ್ಯಾರ್ಥಿಗಳು ಮಣಿಪುರದಲ್ಲಿ ಸೇಫ್​ 

ಬೆಂಗಳೂರು/ ದೂರದ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಘಟನೆಗಳಲ್ಲಿ ಸಿಲುಕಿದ್ದ ಶಿವಮೊಗ್ಗ ಇಬ್ಬರು ಸೇರಿದಂತೆ ರಾಜ್ಯದ ನಾಲ್ವರು ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವ  ಕಾರ್ಯಾಚರಣೆ ನಡೆಯುತ್ತಿದೆ. ಅಂದುಕೊಂಡಂತೆ ನಡೆದರೆ, ಇವತ್ತು ರಾತ್ರಿ ನಾಲ್ವರು ವಿದ್ಯಾರ್ಥಿಗಳು ತವರಿಗೆ ವಾಪಸ್ ಬರಲಿದ್ದಾರೆ. 

ರಾಜ್ಯದ  ನಾಲ್ವರು ವಿದ್ಯಾರ್ಥಿಗಳನ್ನು, ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೈಗೊಂಡಿದೆ. ಈ ಪೈಕಿ ಶಿವಮೊಗ್ಗದ  ವಾರ್ತಾ ಮತ್ತು ಪ್ರಚಾರ ಇಲಾಖೆಯ ನೌಕರರಾದ ತಿಪ್ಪೇಸ್ವಾಮಿಯವರ ಪುತ್ರ ಮನೋಜ್ ಹಾಗೂ ತೀರ್ಥಹಳ್ಳಿ ತಾಲ್ಲೂಕು ನಿವಾಸಿ ವಿಶಾಲ್​ ಪ್ರಪುಲ್ಲಚಂದ್ರರವರ ಪುತ್ರಿ ಅಪ್ಸರ ಹಾಗೂ ಚಿಕ್ಕಮಗಳೂರಿನ ಓರ್ವರು ಸೇರಿದಂತೆ ಬಾಗಲಕೋಟೆಯ ವಿದ್ಯಾರ್ಥಿಯೊಬ್ಬರಿದ್ದಾರೆ. ಇವರುಗಳು ಕಾಲೇಜೊಂದರಲ್ಲಿ ಓದುತ್ತಿದ್ದಾರೆ. 

ಇನ್ನೂ ನಾಲ್ವರನ್ನು ಅವರುಗಳ ಹಾಸ್ಟೆಲ್​ನಿಂದ ಪೊಲೀಸ್ ಭದ್ರತೆಯೊಂದಿಗೆ  ಮಣಿಪುರದ ಇಂಫಾಲ ಕ್ಕೆ ಕರೆತರಲಾಗಿದೆ. ಅಲ್ಲಿಂದ ಅಸ್ಸಾಂನ ಗೌಹಾತಿ ವಿಮಾನ ನಿಲ್ದಾಣಕ್ಕೆ ವಿಮಾನದಲ್ಲಿ ಕರೆತರಲಾಗಿದ್ದು, ರಾತ್ರಿ ವೇಳೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ. 

Read/ Bhadravati/  ಸಂಜೆ ಹೊತ್ತಿನಲ್ಲಿ ಮನೆಗೆ ನುಗ್ಗಿ ದರೋಡೆ! ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ರಾ ಪೊಲೀಸ್ 

Read/ Kichcha Sudeepa/  ನಟ ಸುದೀಪ್​ಗೆ ಬೆದಕಿಗೆ ಹಾಕಿದ್ದ ಆಪ್ತ ಡೈರಕ್ಟರ್​ ಬಂಧನ! ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ? 

Malenadutoday.com Social media

Leave a Comment