KARNATAKA | Dec 19, 2023 | ದೇಶದ ಪ್ರತಿಷ್ಟಿತ ಸಂಘಟನೆಗಳಲ್ಲಿ ಒಂದಾದ ಇಂಡಿಯನ್ ಡೆಂಟಲ್ ಅಸೋಸಿಯೇಷನ್ ನ ಕರ್ನಾಟಕ ವಿಭಾಗದ ಅಧ್ಯಕ್ಷರಾಗಿ ಶಿವಮೊಗ್ಗದ ಡಾ.ಭರತ್ ಎಸ್ವಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಮಂಗಳೂರು ನಲ್ಲಿ ನಡೆದ ಇಂಡಿಯನ್ ಡೆಂಟಲ್ ಅಸೋಸಿಯೇಷನ್ (ಐಡಿಎ) ಕರ್ನಾಟಕ ರಾಜ್ಯ ಶಾಖೆಯ ಸಾಮಾನ್ಯ ಸಭೆಯಲ್ಲಿ ಡಾ. ಭರತ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಶಿವಮೊಗ್ಗ ಮೂಲದ ಡಾ. ಭರತ್ ಈ ಕ್ಷೇತ್ರದದಲ್ಲಿ ತಮ್ಮದೇ ವಿಶಿಷ್ಟ ಸಾಧನೆ ಮಾಡಿದ್ದು, ಅವರ ಆಯ್ಕೆ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.


