SAGARA

ಜೀ ಕನ್ನಡ ವೀರ ಕನ್ನಡಿಗ ಪ್ರಶಸ್ತಿ ವಿಜೆತೆ ಡಾ.ಪ್ರತಿಭಾ ಈಗ ಸಾಗರ ತಹಶೀಲ್ದಾರ್

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Dr. Pratibha R ಸಾಗರ : ಸಾಗರ ತಾಲೂಕು ಕಚೇರಿಯ ನೂತನ ತಹಶೀಲ್ದಾರ್ ಆಗಿ ಡಾ. ಪ್ರತಿಭಾ ಆರ್. ಅವರು ವರ್ಗಾವಣೆಗೊಂಡು ಬಂದಿದ್ದು, ಶನಿವಾರದಂದು ಅಧಿಕೃತವಾಗಿ ತಮ್ಮ ಅಧಿಕಾರವನ್ನು ಸ್ವೀಕರಿಸಿದ್ದಾರೆ. ಈ ಹಿಂದೆ ಬೆಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು, ತಮ್ಮ ದಕ್ಷ ಕಾರ್ಯವೈಖರಿಯ ಮೂಲಕ ಅಲ್ಲಿ ಉತ್ತಮ ಹೆಸರು ಗಳಿಸಿದ್ದರು.

ಸಕಲೇಶ​​ಪುರ ಯುವಕ ಶಿವಮೊಗ್ಗದಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ

ಸಾಹಿತ್ಯ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿರುವ ಡಾ. ಪ್ರತಿಭಾ ಆರ್. ಅವರು ತಮ್ಮ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಮೂಲತಃ ತುಮಕೂರು ಜಿಲ್ಲೆಯವರಾದ ಇವರು ಆರಂಭದಲ್ಲಿ ಶಿಕ್ಷಣ ಇಲಾಖೆಯಲ್ಲಿ ವಿಷಯ ಪರಿವೀಕ್ಷಕರಾಗಿ ಹಾಗೂ ಡಯಟ್ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ತದನಂತರ ಕೆಎಎಸ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವ ಮೂಲಕ ತಹಶೀಲ್ದಾರ್ ಹುದ್ದೆಗೆ ಏರಿದ್ದಾರೆ. ಈ ಹಿಂದೆ ಕಾರ್ಕಳ ಮತ್ತು ಕಾಪು ಸೇರಿದಂತೆ ವಿವಿಧೆಡೆ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸಿ ಜನಮೆಚ್ಚುಗೆ ಪಡೆದಿದ್ದಾರೆ.

2025 ರಲ್ಲಿ ಜೀ ಕನ್ನಡ ವಾಹಿನಿಯು ನೀಡುವ ಪ್ರತಿಷ್ಠಿತ ‘ವೀರ ಕನ್ನಡಿಗ’ ಪ್ರಶಸ್ತಿಗೆ ಡಾ. ಪ್ರತಿಭಾ ಆರ್. ಅವರು ಭಾಜನರಾಗಿದ್ದಾರೆ. ತಾವು ಸೇವೆ ಸಲ್ಲಿಸಿದ ಪ್ರತಿಯೊಂದು ಸ್ಥಳಗಳಲ್ಲಿಯೂ ಅಪಾರ ಸಾಮಾಜಿಕ ಕಳಕಳಿಯನ್ನು ಪ್ರದರ್ಶಿಸಿರುವ ಅವರು, ಸಾಗರ ತಾಲೂಕಿನಲ್ಲಿಯೂ ಅತ್ಯುತ್ತಮವಾಗಿ ಕೆಲಸ ಮಾಡುವ ಮೂಲಕ ಜನಸೇವೆ ಮಾಡುವುದಾಗಿ ಅಧಿಕಾರ ಸ್ವೀಕರಿಸಿದ ಬಳಿಕ ತಿಳಿಸಿದ್ದಾರೆ.

Dr. Pratibha R Takes Charge as New Tehsildar

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.