ಚುನಾವಣೆ ಹಿನ್ನೆಲೆ ಎಚ್ಚೆತ್ತ ಅಬಕಾರಿ ಇಲಾಖೆ! ಕಳ್ಳಭಟ್ಟಿ ಅಡ್ಡೆಗಳ ಮೇಲೆ ದಾಳಿ

Malenadu Today

 MALENADUTODAY.COM | SHIVAMOGGA  | #KANNADANEWSWEB

ಶಿವಮೊಗ್ಗದಲ್ಲಿ ಚುನಾವಣೆ ಸಿದ್ದತೆಯ ನಡುವೆ ಅಬಕಾರಿ ಇಲಾಖೆ ಅಕ್ರಮ ಸಾರಾಯಿ ಅಡ್ಡೆಗಳ ಬಗ್ಗೆ ಅಲರ್ಟ್ ಆದಂತಿದೆ. ಇದಕ್ಕೆ ಪೂರಕ ಎಂಬಂತೆ, ಶಿವಮೊಗ್ಗ ಅಬಕಾರಿ ಉಪ ಆಯುಕ್ತರು  ಕ್ಯಾಪ್ಟನ್ ಅಜಿತ್ ಕುಮಾರ್ ನಿರ್ದೇಶನದಂತೆ  ದಾಳಿ ನಡೆಸಿ ಕಳ್ಳಭಟ್ಟಿ ವಶಕ್ಕೆ ಪಡೆಯಲಾಗಿದೆ

READ | ಕೋವಿಡ್ ಟೈಂನಲ್ಲಿ ರಜೆ ಕೇಳಿ ಹೋಗಿದ್ದ ಕಾನ್​ಸ್ಟೇಬಲ್​ ಕಾಣೆ! ಮಾಳೂರು ಪೊಲೀಸ್ ಸ್ಟೇಷನ್​ನಲ್ಲಿ ದಾಖಲಾಯ್ತು ಕೇಸ್

ಶಿಕಾರಿಪುರ ವಲಯದ ಅಬಕಾರಿ ನಿರೀಕ್ಷಕರಾದ  ರಮೇಶ ಕೆ. ಹೆಚ್ ಈ ದಾಳಿ ನಡೆಸಿದ್ದು,  ಮಳವಳ್ಳಿ ತಾಂಡಾದಲ್ಲಿ  ಟೋಪಿಯನಾಯ್ಕ ಬಿನ್ ಪೀತನಾಯ್ಕ ಎಂಬುವವರ ವಾಸದ ಮನೆಯಲ್ಲಿ 01 ಲೀಟರ್ ಕಳ್ಳಭಟ್ಟಿ ಸಾರಾಯಿ ಹಾಗೂ 30 ಲೀಟರ್ ಬೆಲ್ಲದ ಕೊಳೆಯನ್ನು ವಶಪಡಿಸಿಕೊಳ್ಳಲಾಗಿದೆ. 

ಈ ಸಂಬಂಧ ಅಬಕಾರಿ ಕಾಯ್ದೆ ಅಡಿಯಲ್ಲಿ ಆರೋಪಿತನ ವಿರುದ್ಧ ಮೊಕದ್ದಮೆಯನ್ನು ದಾಖಲಿಸಲಾಗಿದೆ. ಇನ್ನೂ ದಾಳಿಯಲ್ಲಿ ಅಬಕಾರಿ ಉಪ ನಿರೀಕ್ಷಕರಾದ ಚಂದ್ರಪ್ಪ ಎಸ್. ಡಿ, ಸಿಬ್ಬಂದಿಗಳಾದ ಸಂತೋಷ್, ಮಂಜುನಾಥ್‌, ಹನುಮಂತಪ್ಪಹಾಗೂ ಕನಕಪ್ಪರಿದ್ದರು

Share This Article