ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಂದೆ! ಹೃದಯ ಕಲಕುತ್ತಿದೆ ಭೀಕರ ಘಟನೆ

KARNATAKA NEWS/ ONLINE / Malenadu today/ Jun 2, 2023 SHIVAMOGGA NEWS

ದಾವಣಗೆರೆ ಯಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ತಂದೆಯೇ ತನ್ನಿಬ್ಬರು ಅವಳಿ ಮಕ್ಕಳನ್ನ ಕೊಂದಿರುವ ಬಗ್ಗೆ ವರದಿಯಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಹತ್ತಿರ ಈ ಕೃತ್ಯವೆಸಗಿದ್ದು, ಆತ ದಾವಣಗೆರೆ ನಗರದ ಆಂಜನೇಯ ಬಡಾವಣೆ ನಿವಾಸಿಯಾಗಿದ್ಧಾನೆ. 

ನಾಲ್ಕು ವರ್ಷದ ನಾಲ್ಕು ತಿಂಗಳ ಮಕ್ಕಳು ಮೃತರಾಗಿದ್ದಾರೆ. 

ಇದನ್ನು ಸಹ ಓದಿ :  ಚೀಲೂರು ಡಬ್ಬಲ್​ ಅಟ್ಯಾಕ್! ಹಂದಿ ಅಣ್ಣಿ ಕೊಲೆ ಆರೋಪಿಗಳ ಮೇಲಿನ ದಾಳಿಯಲ್ಲಿ ಯಾರೆಲ್ಲಾ ಆರೋಪಿಗಳು ಗೊತ್ತಾ? ಫಿಟ್ ಆದನಾ ಹೆಬ್ಬೆಟ್ಟು ಮಂಜಾ?

 

ಅಮರ್​ ಎಂಬಾತ  ಹರಿಹರದ ಕಾರ್ಗಿಲ್ ಫ್ಯಾಕ್ಟರಿಯಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಕೆಲಸ ಮಾಡುತ್ತಿದ್ಧಾನೆ.  ಈತ ವಿಜಯಪುರದ ಜಯಲಕ್ಷ್ಮಿ ಎಂಬಾಕೆಯನ್ನು ಮದುವೆಯಾಗಿದ್ದ, ಇವರಿಬ್ಬರಿಗೆ ಇಬ್ಬರು ಅವಳಿ ಮಕ್ಕಳು ಜನಿಸಿದ್ದರು. ಈ ಮಧ್ಯೆ ಪತ್ನಿ ವಿಜಯಲಕ್ಷ್ಮೀ ತವರಿಗೆ ಹೋಗಿದ್ದಾರೆ. ಗಂಡ ಹೆಂಡತಿ ನಡುವೆ ಯಾವ ಕಾರಣಕ್ಕೆ ವೈಮನಸ್ಯವಿತ್ತು ಎಂಬುದು ಸ್ಪಷ್ಟವಾಗಿಲ್ಲ.  ಮಕ್ಕಳು ಅಮರ್ ತಾಯಿ ಸಾವಿತ್ರಮ್ಮರ ಜೊತೆ ಇದ್ದರು. 

ಮೊಬೈಲ್​ ಕಳೆದುಕೊಂಡ ಬೆನ್ನಲ್ಲೆ ಅಕೌಂಟ್​ನಲ್ಲಿದ್ದ ಲಕ್ಷ ರೂಪಾಯಿನೂ ಮಾಯವಾಯ್ತು! ಹೀಗೂ ಮಾಡ್ತಾರೆ ಎಚ್ಚರ!

ಇದರ ನಡುವೆ ಅಜ್ಜಿ ಜೊತೆ ಮಲಗಿದ್ದ ಇಬ್ಬರು ಮಕ್ಕಳನ್ನ ತನ್ನ ಕಾರಿನಲ್ಲಿ ಕರೆದೊಯ್ದ ಅಮರ್​  ಚಳಗೇರಿ ಟೋಲ್ ಸಮೀಪ ಕರೆದುಕೊಂಡು ಹೋಗಿ ಸರ್ವಿಸ್ ರಸ್ತೆ ಯಲ್ಲಿ ಕಾರು ನಿಲ್ಲಿಸಿ ಮಕ್ಕಳಿಬ್ಬರಿಗೂ ಟಿಕ್ಸ್‌ ಟೇಪ್‌ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಆ ನಂತರ ಪತ್ನಿಗೆ ಫೋನ್ ಮಾಡಿ ಮಕ್ಕಳನ್ನು ಕೊಂದು ಹಾಕಿರುವುದಾಗಿ ತಿಳಿಸಿದ್ದಾನೆ.

ಆರ್​ಎಂ ಮಂಜುನಾಥ್​ ಗೌಡರಿಗೆ ಕೆಪಿಸಿಸಿಯಿಂದ ಸಿಕ್ತು ಮಹತ್ತರ ಜವಾಬ್ದಾರಿ!

ಸದ್ಯ ಪ್ರಕರಣ ಸಂಬಂಧ ಆರೋಪಿಯನ್ನು ದಾವಣಗೆರೆ ವಿದ್ಯಾನಗರ ಪೊಲೀಸರು ಬಂಧಿಸಿದ್ದು, ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಅಲ್ಲದೆ ಮಕ್ಕಳು ಬುದ್ದಿ ಮಾಂದ್ಯರು ಎಂಬ ಕಾರಣಕ್ಕೆ ಈ ಕೃತ್ಯವೆಸಗಿರುವ ಬಗ್ಗೆ ಆತ ಪೊಲೀಸರಿಗೆ ತಿಳಿಸಿದ್ಧಾನೆ ಎನ್ನಲಾಗುತ್ತಿದೆ

 

 

Leave a Comment