ಭದ್ರಾವತಿಯಲ್ಲಿ ಹುಲ್ಲಿನ ಬಣವೆಗೆ ಬೆಂಕಿ

ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎನ್ನಲಾಗುತ್ತಿದೆ

ಭದ್ರಾವತಿಯಲ್ಲಿ ಹುಲ್ಲಿನ ಬಣವೆಗೆ ಬೆಂಕಿ
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ದೊಣಬಘಟ್ಟದಲ್ಲಿ ಅಗ್ನಿ ಆಕಸ್ಮಿಕವೊಂದು  ಸಂಭವಿಸಿದೆ. ಇಲ್ಲಿನ ಸ್ಥಳೀಯೊಬ್ಬರಿಗೆ ಸೇರಿದ ಹುಲ್ಲಿನ ಬಣವವೆಯೊಂದಕ್ಕೆ ಬೆಂಕಿಬಿದ್ದು ಸಂಪೂರ್ಣ ಸುಟ್ಟು ನಷ್ಟವಾಗಿದೆ. 
ದೊಣಬಘಟ್ಟ ಗ್ರಾಮದ ನಿವಾಸಿ ನಾಸೀರ್ ಎಂಬವರ ಜಮೀನಿನ ಕಣದಲ್ಲಿದ್ದ ಹುಲ್ಲಿನ ಬಣವೆಗೆ ಬೆಂಕಿ ಬಿದ್ದಿದೆ. ಈ ಸಂಬಂಧ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಘಟನೆಯಲ್ಲಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎನ್ನಲಾಗುತ್ತಿದೆ. 
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link