ಶಿವಮೊಗ್ಗದಿಂದ ವಿಮಾನಯಾನ ಆರಂಭದ ದಿನಾಂಕ ಬದಲು! ಸಂಸದರು ಹೇಳಿದ್ದೇನು? ಸಿಗಂದೂರು ಸೇತುವೆ ವಿಚಾರಕ್ಕೂ ನೀಡಿದ್ರು ಬಿ.ವೈ.ರಾಘವೇಂದ್ರ ಸ್ಪಷ್ಟನೆ!

Malenadu Today

KARNATAKA NEWS/ ONLINE / Malenadu today/ Jun 16, 2023 SHIVAMOGGA NEWS

ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣ (Shivamogga airport) ನಲ್ಲಿ ವಿಮಾನಗಳ ಹಾರಾಟ ಮೊದಲು ಆಗಸ್ಟ್ 11 ರಿಂದ ಆರಂಭವಾಗಲಿದೆ ಎನ್ನಲಾಗಿತ್ತು. ಇದೀಗ ಆಗಸ್ಟ್ 8 ರಿಂದಲೇ ವಿಮಾನಯಾನ ಆರಂಭವಾಗಲಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ. ವರ್ತಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಸಂಸದರು,  ಇನ್ನೆರಡು ತಿಂಗಳಲ್ಲಿ ಮಲೆನಾಡಿನಿಂದ ವಿಮಾನಯಾನ ಆರಂಭವಾಗಲಿದೆ.  ಇಂಡಿಗೋ ಸಂಸ್ಥೆಯೊಂದಿಗೆ ಒಡಂಬಡಿಕೆ ಪೂರ್ಣಗೊಂಡಿದೆ ಎಂದಿದ್ದಾರೆ. 

ಶಿವಮೊಗ್ಗ-ಬೆಂಗಳೂರು ವಿಮಾನದ ಟೈಮಿಂಗ್ಸ್​ ಏನು!? ಟಿಕೆಟ್ ದರ ಎಷ್ಟು? ಬುಕ್ಕಿಂಗ್ ಯಾವಾಗಿನಿಂದ ಪ್ರಾರಂಭ!? ಪೂರ್ತಿ ವಿವರ

ಆಗಸ್ಟ್ 8 ರಿಂದಲೇ ಆರಂಭ ವಿಮಾನಯಾನ

ಶಿವಮೊಗ್ಗದಿಂದ ನಾಗರಿಕ ವಿಮಾನ ಯಾನವು ಆಗಸ್ಟ್ 8 ರಿಂದ ಆರಂಭವಾಗಲಿದೆ. ಅಲ್ಲಿಂದ ಜಿಲ್ಲೆ ಅಲ್ಲದೆ ಮಧ್ಯ ಕರ್ನಾಟಕದ ಅಭಿವೃದ್ಧಿಗೆ ಹೊಸ ಆಯಾಮ ದೊರೆಯಲಿದೆ.  ಕೈಗಾರಿಕೆ, ವಾಣಿಜ್ಯೋದ್ಯಮ, ಪ್ರವಾಸೋದ್ಯಮ, ಶೈಕ್ಷಣಿಕ ಕ್ಷೇತ್ರಗಳ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎಂದರು.

 ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರಿಗೆ ನೂತನ ರೈಲು ಸಂಪರ್ಕ 

ರೈಲ್ವೆ ಕ್ಷೇತ್ರದಲ್ಲೂ ಕೂಡ ಮಹತ್ತರ ಬದಲಾವಣೆ ಯಾಗಲಿದೆ ಎಂದ ಸಂಸದ ಬಿ.ವೈ ರಾಘವೇಂದ್ರರವರು,. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರಿಗೆ ನೂತನ ರೈಲು ಸಂಪರ್ಕ ಕಲ್ಪಿಸಲಾಗುತ್ತಿದೆ. ಈ ಮಾರ್ಗವು 10 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಇದು ಸಹ ಜಿಲ್ಲೆಯ ಸರ್ವಾ೦ಗೀಣ ಅಭಿವೃದ್ಧಿಗೆ ಸಹಕಾರಿಯಾಗುವುದರಲ್ಲಿ ಅನುಮಾನವಿಲ್ಲಎಂದರು.

ಸಿಗಂದೂರು ಸೇತುವೆ ವಿಚಾರದಲ್ಲಿ ಸ್ಪಷ್ಟನೆ!

ಲಿಂಗನಮಕ್ಕಿ ಜಲಾಶಯದ ನೀರನ್ನು ನಾವು ಕಡಿಮೆ ಮಾಡಿದ್ದೇವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆಪಾದಿಸಿದ್ದಾರೆ. ಅದ್ಯಾಕೆ ಆ ರೀತಿ ಆರೋಪ ಮಾಡಿದ್ದಾರೋ ಗೊತ್ತಿಲ್ಲ, ಸೇತುವೆ ನಿರ್ಮಾಣ ಮಾಡಲು, ಸಾಮಗ್ರಿಗಳನ್ನು ಸಾಗಿಸಲು ನೀರು ಬೇಕು. ನೀರು ನಾವು ಕಡಿಮೆ ಮಾಡಲು ಆಗುತ್ತಾ ಎಂದು ಪ್ರಶ್ನಿಸಿದ್ರು. 

ಆಗಸ್ಟ್​ 15 ಕ್ಕೆ ಶಿವಮೊಗ್ಗದ ಪ್ರಮುಖ ಮೇಲ್ಸೇತುವೆ ಉದ್ಘಾಟನೆ! ತುಂಗಾನದಿಯ ಹೊಸ ಬ್ರಿಡ್ಜ್​​ ಓಪನ್​! ಕಡದಕಟ್ಟೆ, ಸವಳಂಗ ರಸ್ತೆ, ಕಾಶಿಪುರ ಓವರ್​ ಬ್ರಿಡ್ಜ್​ ಬಗ್ಗೆ ಸಂಸದರು ಹೇಳಿದ್ದೇನು?

ಶಿವಮೊಗ್ಗದ ರೇಷನ್​ ಕಾರ್ಡ್​ದಾರರಿಗೆ ಮಹತ್ವದ ಮಾಹಿತಿ! ಪಡಿತರ ಪಡೆಯಲು 27 ಲಾಸ್ಟ್​ ಡೇಟ್​! ಇ ಕೆವೈಸಿ ಮಾಡಿಸಿದ್ರಾ?

ಶಿವಮೊಗ್ಗ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಸರ್ವರ್ ನಿರ್ವಹಣಾ ಕಾರ್ಯವನ್ನು ಜೂ.28 ರಿಂದ ಕೈಗೊಳ್ಳಲಿದ್ದು, ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಜೂನ್-2023ರ ಮಾಹೆಯ ಪಡಿತರವನ್ನು ದಿನಾಂಕ  27/06/2023 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಿಂದ ಪಡೆದುಕೊಳ್ಳುವಂತೆ ಶಿವಮೊಗ್ಗ ತಾಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಶಿವಮೊಗ್ಗ ತಾಲೂಕು ಗ್ರಾಮಾಂತರ ವ್ಯಾಪ್ತಿಯ ಎಲ್ಲಾ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಜೂ. 27ರೊಳಗಾಗಿ ಪಡಿತರ ವಿತರಣಾ ಕಾರ್ಯವನ್ನು ಕಡ್ಡಾಯವಾಗಿ ಮುಕ್ತಾಯಗೊಳಿಸುವಂತೆ ಹಾಗೂ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ಕಡ್ಡಾಯವಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ನೋಂದಾಯಿಸಿಕೊಳ್ಳಲು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. 

 

Share This Article