ಇನ್ನೊಂದು ವಾರದಲ್ಲಿ ವಿಮಾನ ಹಾರಾಟ! ಟಿಕೆಟ್ಗೆ ₹500 ಸಬ್ಸಿಡಿ! ಏಕೆಗೊತ್ತಾ?
Flights from Shimoga airport to resume in a week's time Rs 500 subsidy on tickets! Do you know why?
ಇನ್ನೊಂದು ವಾರದಲ್ಲಿ ಶಿವಮೊಗ್ಗ ಏರ್ಪೋರ್ಟ್ನಲ್ಲಿ ವಿಮಾನ ಹಾರಾಟ ಆರಂಭವಾಗಲಿದೆ ಅಂತಾ ಸಂಸದ ಬಿವೈ ರಾಘವೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು ವಿಮಾನ ಹಾರಾಟಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ರು.
6 ಕೋಟಿ ರೂ. ವೆಚ್ಚದ 3 ಅಗ್ನಿಶಾಮಕ ವಾಹನಗಳು ಬರುವವರೆಗೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು (ಡಿಜಿಸಿಎ) ಕೆಲ ಕ್ಲಿಯರೆನ್ಸ್ ನೀಡುವುದಿಲ್ಲ ಎಂದು ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಾಡಿಗೆ ತಂದಿದ್ದ ಅಗ್ನಿಶಾಮಕ ವಾಹನಗಳಿಗೆ ಬದಲಾಗಿದೆ ದುಬೈನಿಂದ ಒಂದಕ್ಕೆ ಆರು ಕೋಟಿ ವೆಚ್ಚದಲ್ಲಿ ವಿಶೇಷ ಅಗ್ನಿಶಾಮಕ ವಾಹನಗಳನ್ನು ತರಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ರು.
ಇನ್ನೊಂದು ವಾರದಲ್ಲಿ ಅಗ್ನಿಶಾಮಕ ವಾಹಗಳು ಬರುತ್ತಿದ್ದು, ಇಂಡಿಗೋ ಏರ್ಲೈನ್ಸ್ನೊಂದಿಗೆ ಸಭೆ ನಡೆಸಲಾಗುತ್ತಿದೆ. ಅಂದುಕೊಂಡಂತೆ ಆದರೆ, ಒಂದು ವಾರದೊಳಗಾಗಿ ಶಿವಮೊಗ್ಗ ದಿಂದ ಬೆಂಗಳೂರಿಗೆ ಪ್ರತಿನಿತ್ಯ ಇಲ್ಲಿಂದ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ರು
ಇನ್ನೂ ಶಿವಮೊಗ್ಗ ಬೆಂಗಳೂರು ನಡುವಿನ ಪ್ರಯಾಣದ ಟಿಕೆಟ್ಗೆ 500 ರೂಪಾಯಿ ಸಬ್ಸಿಡಿ ನೀಡುವುದಕ್ಕೆ ಸರ್ಕಾರ ಒಪ್ಪಿದ್ದು, ಈ ಸಂಬಂಧ ಒಪ್ಪಂದ ಮಾಡಿಕೊಳ್ಳಲಾಗಿದೆ. ವಿಶೇಷ ಅಂದರೆ, ಮಾರ್ಚ್ 25 ರಂದು ದಾವಣಗೆರೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ ಎಂದು ಮಾಹಿತಿ ನೀಡಿದ್ರು.
MALENADUTODAY.COM |SHIVAMOGGA| #KANNADANEWSWEB
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today, Shikaripura Court/ Shikaripura Court Judgment, Shiralakoppa Police Station, Assault Case, Abuse Case, Verdict to accused in old cases, 1st Additional CJ and JMFC Court, Shikaripura court /