ಮನೆಯಲ್ಲಿ ಮುಳ್ಳು ಹಂದಿ ಬೇಯುತ್ತಿದ್ದಾಗಲೇ ಬಂದ್ರು ಅರಣ್ಯ ಅಧಿಕಾರಿಗಳು! ಫುಲ್ ಶಾಕ್!
The forest department officials raided under the charge of collecting porcupine meat ಮುಳ್ಳು ಹಂದಿ ಮಾಂಸ ಸಂಗ್ರಹಿಸಿದ್ದ ಆರೋಪದಡಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ
KARNATAKA NEWS/ ONLINE / Malenadu today/ Nov 12, 2023 SHIVAMOGGA NEWS
Shivamogga | ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಳಿಕೊಪ್ಪ ಗದ್ದೆಮನೆ ಗ್ರಾಮದಲ್ಲಿ ಭಾನುವಾರ ಅರಣ್ಯ ಇಲಾಖೆ ಅಧಿಕಾರಿಗಳು ಮುಳ್ಳುಹಂದಿ ಯನ್ನು ಬೇಟೆಯಾಡಿ ಮಾಂಸಕ್ಕಾಗಿ ಬಳಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಮಾಲುಸಹಿತ ವಶಕ್ಕೆ ಪಡೆಯಲಾಗಿದೆ.
READ : ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶ ಪಡಿಸಿಕೊಂಡ ಕರಿಮರದ ವಿಶೇಷತೆ ಏನು ಗೊತ್ತಾ?
ಏನಿದು ಕೇಸ್?
ಅರಣ್ಯ ಇಲಾಖೆ ಅಧಿಕಾರಿಗಳು ಗಸ್ತಿನಲ್ಲಿದ್ದಾಗ ಗದ್ದಮನೆಯ ಈಶ್ವರ ಅವರ ಮನೆಯನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ, ಮುಳ್ಳುಹಂದಿಯ ಮಾಂಸ ಮತ್ತು ಚರ್ಮ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಶ್ವರ್,
ರಾಘವೇಂದ್ರ, ಪ್ರಭಾಕರ್ಮತ್ತು ಶ್ರೀಧರ್ ಅವರನ್ನು ಬಂಧಿಸಲಾಗಿದೆ. ಬಂಧಿತರ ವಿರುದ್ದ ವನ್ಯ ಜೀವಿ ಸಂರಕ್ಷಣಾ ಕಾಯ್ದೆ 9, 44, 49ಬಿ ಮತ್ತು 51ರಡಿ ಪ್ರಕರಣ ದಾಖಲಿಸಲಾಗಿದೆ.