KARNATAKA NEWS/ ONLINE / Malenadu today/ Nov 12, 2023 SHIVAMOGGA NEWS
Shivamogga | ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಳಿಕೊಪ್ಪ ಗದ್ದೆಮನೆ ಗ್ರಾಮದಲ್ಲಿ ಭಾನುವಾರ ಅರಣ್ಯ ಇಲಾಖೆ ಅಧಿಕಾರಿಗಳು ಮುಳ್ಳುಹಂದಿ ಯನ್ನು ಬೇಟೆಯಾಡಿ ಮಾಂಸಕ್ಕಾಗಿ ಬಳಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಮಾಲುಸಹಿತ ವಶಕ್ಕೆ ಪಡೆಯಲಾಗಿದೆ.
READ : ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶ ಪಡಿಸಿಕೊಂಡ ಕರಿಮರದ ವಿಶೇಷತೆ ಏನು ಗೊತ್ತಾ?
ಏನಿದು ಕೇಸ್?
ಅರಣ್ಯ ಇಲಾಖೆ ಅಧಿಕಾರಿಗಳು ಗಸ್ತಿನಲ್ಲಿದ್ದಾಗ ಗದ್ದಮನೆಯ ಈಶ್ವರ ಅವರ ಮನೆಯನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ, ಮುಳ್ಳುಹಂದಿಯ ಮಾಂಸ ಮತ್ತು ಚರ್ಮ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಶ್ವರ್,
ರಾಘವೇಂದ್ರ, ಪ್ರಭಾಕರ್ಮತ್ತು ಶ್ರೀಧರ್ ಅವರನ್ನು ಬಂಧಿಸಲಾಗಿದೆ. ಬಂಧಿತರ ವಿರುದ್ದ ವನ್ಯ ಜೀವಿ ಸಂರಕ್ಷಣಾ ಕಾಯ್ದೆ 9, 44, 49ಬಿ ಮತ್ತು 51ರಡಿ ಪ್ರಕರಣ ದಾಖಲಿಸಲಾಗಿದೆ.