ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಬಗ್ಗೆ ಕೊನೆಯ ಅಭಿಪ್ರಾಯ ತಿಳಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ
Former CM BS Yediyurappa makes last statement on Bhadravathi iron and steel factory
ಲಕ್ಷಾಂತರ ಮಂದಿಗೆ ಬದುಕು ಕೊಟ್ಟಿದ್ದ ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನುಉಳಿಸಿಕೊಳ್ಳುವ ಪ್ರಯತ್ನಗಳೆಲ್ಲವೂ ವಿಫಲವಾಗಿದೆ. ಈ ಸಂಬಂಧ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (ಸೈಲ್) ಆಡಳಿತ ಮಂಡಳಿಯಲ್ಲಿ ಕಾರ್ಖಾನೆಯನ್ನು ಮುಚ್ಚುವ ಪ್ರಸ್ತಾವನೆಗೆ ಅಂಗೀಕಾರ ದೊರಕಿದೆ. ಇದರಿಂದಾಗಿ ಕಾರ್ಖಾನೆಯನ್ನು ಮುಚ್ಚುವುದು ಅಧಿಕೃತವಾಗುತ್ತಿದೆ.
ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಹಳ ಹಿಂದೇಯೇ ಈ ಬಗ್ಗೆ ಬಹಳಷ್ಟು ಚರ್ಚೆ ನಡೆದಿದೆ. ದೇಶದಲ್ಲಿ ಹೂಡಿಕೆ ಹಿಂತೆಗತ ಬಗ್ಗೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ನಷ್ಟದಲ್ಲಿರುವ ಕಾರ್ಖಾನೆಗಳಲ್ಲಿ ಹೂಡಿಕೆ ಹಿಂತೆಗೆತ ರಾಷ್ಟ್ರ ಮಟ್ಟದ ತೀರ್ಮಾನವಾಗಿದೆ. ಈ ನಿಟ್ಟಿನಲ್ಲಿ ಕಾರ್ಖಾನೆಯನ್ನು ಉಳಿಸುವ ಸಲುವಾಗಿ ಸಂಸದ ಬಿ.ವೈ ರಾಘವೇಂದ್ರರವರು ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಆದರೆ ಸಮಯ ಈಗ ಕೈ ಮೀರಿ ಹೋಗಿದೆ ಎಂದಿದ್ದಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com