‘ಗ್ರಾಂ ಕಮ್ಮಿಯಿದ್ದರೂ ಸುಮ್ಮನಿರಲ್ಲ’ ಅಕ್ಕಿ ಗ್ಯಾರಂಟಿ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮಹತ್ವದ ಹೇಳಿಕೆ!
Former CM BS Yediyurappa's statement on 'rice' guarantee
![‘ಗ್ರಾಂ ಕಮ್ಮಿಯಿದ್ದರೂ ಸುಮ್ಮನಿರಲ್ಲ’ ಅಕ್ಕಿ ಗ್ಯಾರಂಟಿ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮಹತ್ವದ ಹೇಳಿಕೆ!](https://malenadutoday.com/uploads/images/202306/image_750x_648ea51b21e03.jpg)
KARNATAKA NEWS/ ONLINE / Malenadu today/ Jun 18, 2023 SHIVAMOGGA NEWS
ಶಿವಮೊಗ್ಗ ನಗರದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಕ್ಕಿ ವಿಚಾರದಲ್ಲಿ ರಾಜ್ಯಸರ್ಕಾರ ಗೊಂದಲ ಉಂಟು ಮಾಡುತ್ತಿದೆ ಎಂದರು. ಅಲ್ಲದೆ ಕೇಂದ್ರ ಸರ್ಕಾರ, 5 ಕೆ.ಜಿ ಅಕ್ಕಿ ಉಚಿತವಾಗಿ ನೀಡುತ್ತಿದೆ. ಹೆಚ್ಚುವರಿ ಅಕ್ಕಿ ಕೊಡ್ತೀವಿ ಎಂದು ಹೇಳಿರಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರದ 10 ಕೆಜಿ ಕೊಡಬೇಕು ಎಂದು ಭರವಸೆ ನೀಡಿದೆ. ಆ ನಿಟ್ಟಿನಲ್ಲಿ ಅವರ ಭರವಸೆಯನ್ನು ಈಡೇರಿಸಬೇಕು. ಇದರಲ್ಲಿ ಒಂದು ಗ್ರಾಮ್ ಅಕ್ಕಿ ಕಡಿಮೆಯಾದರೂ ಜನರು ಒಪ್ಪುವುದಿಲ್ಲ. ಎಲ್ಲಿಂದಾದರೂ ಅಕ್ಕಿ ತಂದು ಕೊಡಲಿ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಈ ವಿಚಾರದಲ್ಲಿ ಮೋದಿ ಸರ್ಕಾರವನ್ನು ಧೂಷಣೆ ಮಾಡುವುದು ಸರಿಯಲ್ಲ ಎಂದ ಅವರು ಸದನ ಆರಂಭವಾಗುವುದರೊಳಗೆ ವಿಪಕ್ಷ ನಾಯಕನ ಆಯ್ಕೆಯಾಗಲಿದೆ. ಅದರಲ್ಲಿ ಯಾವುದೇ ವಿಶೇಷವಿಲ್ಲ ಎಂದರು.
ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಹೇಳಿಕೆ! ಒಂದು ಗ್ರಾಂ ಕಮ್ಮಿಕೊಟ್ಟರೂ ಸುಮ್ಮನಿರಲ್ಲ#ShivamoggaNews #shivamogga #Shimoga #MalnadNews #LocalNews #KannadaNewsWebsite #LatestNews #todaynewsheadlinesofworld, #newstoday #kannadaonlinenews pic.twitter.com/7u1Bwmf7no — malenadutoday.com (@CMalenadutoday) June 18, 2023
ಶಿವಮೊಗ್ಗದ ತುಂಗಾನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಮಹಿಳೆಯ ಕೊಲೆ!
ಶಿವಮೊಗ್ಗ ನಗರದಲ್ಲಿ ಮಹಿಳೆಯೊಬ್ಬರ ಕೊಲೆಯಾಗಿದೆ. ವಿಜಯ ನಗರದ 2 ನೇ ತಿರುವಿನಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದೆ. ಕಮಲಮ್ಮ(54) ಕೊಲೆಯಾದ ಮಹಿಳೆ
ಚಿಕ್ಕಮಗಳೂರಿನ ತರೀಕೆರೆ ತಾಲ್ಲೂಕು ಅಜ್ಜಂಪುರದಲ್ಲಿ ಎಕ್ಸಿಕ್ಯುಟಿವ್ ಎಂಜಿನಿಯರ್ ಆಗಿರುವ ಮಲ್ಲಿಕಾರ್ಜುನರವರ ಪತ್ನಿ ಕಮಲಮ್ಮ ಕೊಲೆಯಾಗಿದ್ದಾಳೆ . ಮಲ್ಲಿಕಾರ್ಜುನ್ರವರು ಗೋವಾಕ್ಕೆ ತೆರಳಿದ್ರು. ಈ ವೇಳೆ ಘಟನೆ ನಡೆದಿದೆ. ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಬಗ್ಗೆ ವರದಿಯಾಗಿದೆ. ನಿನ್ನೆ ಸಂಜೆ ಘಟನೆ ನಡೆದಿರುವ ಸಾಧ್ಯತೆ ಇದ್ದು ಸ್ಥಳಕ್ಕೆ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.
ಗೋವಾಕ್ಕೆ ತೆರಳಿದ್ದ ಮಲ್ಲಿಕಾರ್ಜುನ್ರವರು ಮನೆಗೆ ಕರೆ ಮಾಡಿದಾಗ ಫೋನ್ ಕಾಲ್ ಯಾರು ಸ್ವೀಕರಿಸಲಿಲ್ಲ. ಹೀಗಾಗಿ ಅನುಮಾನಗೊಂಡು ಅಕ್ಕಪಕ್ಕದವರಿಗೆ ಕರೆ ಮಾಡಿದ್ದಾರೆ. ಅಲ್ಲಿದ್ದವರು ಮನೆಗೆ ಹೋಗಿ ನೋಡಿದಾಗ ಬಾಗಿಲು ತೆರದ ಸ್ಥಿತಿಯಲ್ಲಿತ್ತು. ಒಳಗಡೆ ಮಹಿಳೆಯ ಕೊಲೆಯಾಗಿರುವುದು ಕಂಡು ಬಂದಿದೆ. ಸದ್ಯ ದಾವಣಗೆರೆಯಿಂದ ಎಫ್ಎಸ್ಎಲ್ ತಂಡ ಬರುತ್ತಿದ್ದು,ಘಟನೆ ಸಂಬಂಧ ತುಂಗಾನಗರ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.