‘ಗ್ರಾಂ ಕಮ್ಮಿಯಿದ್ದರೂ ಸುಮ್ಮನಿರಲ್ಲ’ ಅಕ್ಕಿ ಗ್ಯಾರಂಟಿ ಬಗ್ಗೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ಮಹತ್ವದ ಹೇಳಿಕೆ!

Former CM BS Yediyurappa's statement on 'rice' guarantee

‘ಗ್ರಾಂ ಕಮ್ಮಿಯಿದ್ದರೂ ಸುಮ್ಮನಿರಲ್ಲ’ ಅಕ್ಕಿ ಗ್ಯಾರಂಟಿ ಬಗ್ಗೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ಮಹತ್ವದ ಹೇಳಿಕೆ!

KARNATAKA NEWS/ ONLINE / Malenadu today/ Jun 18, 2023 SHIVAMOGGA NEWS

ಶಿವಮೊಗ್ಗ ನಗರದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಕ್ಕಿ ವಿಚಾರದಲ್ಲಿ ರಾಜ್ಯಸರ್ಕಾರ ಗೊಂದಲ ಉಂಟು ಮಾಡುತ್ತಿದೆ ಎಂದರು. ಅಲ್ಲದೆ ಕೇಂದ್ರ ಸರ್ಕಾರ,  5 ಕೆ.ಜಿ ಅಕ್ಕಿ ಉಚಿತವಾಗಿ ನೀಡುತ್ತಿದೆ. ಹೆಚ್ಚುವರಿ ಅಕ್ಕಿ ಕೊಡ್ತೀವಿ ಎಂದು ಹೇಳಿರಲಿಲ್ಲ. ಆದರೆ ಕಾಂಗ್ರೆಸ್​ ಸರ್ಕಾರದ 10 ಕೆಜಿ ಕೊಡಬೇಕು ಎಂದು ಭರವಸೆ ನೀಡಿದೆ. ಆ ನಿಟ್ಟಿನಲ್ಲಿ ಅವರ ಭರವಸೆಯನ್ನು ಈಡೇರಿಸಬೇಕು. ಇದರಲ್ಲಿ ಒಂದು ಗ್ರಾಮ್ ಅಕ್ಕಿ ಕಡಿಮೆಯಾದರೂ ಜನರು ಒಪ್ಪುವುದಿಲ್ಲ. ಎಲ್ಲಿಂದಾದರೂ ಅಕ್ಕಿ ತಂದು ಕೊಡಲಿ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ. 

ಈ ವಿಚಾರದಲ್ಲಿ ಮೋದಿ ಸರ್ಕಾರವನ್ನು ಧೂಷಣೆ ಮಾಡುವುದು ಸರಿಯಲ್ಲ ಎಂದ ಅವರು ಸದನ ಆರಂಭವಾಗುವುದರೊಳಗೆ ವಿಪಕ್ಷ ನಾಯಕನ ಆಯ್ಕೆಯಾಗಲಿದೆ. ಅದರಲ್ಲಿ ಯಾವುದೇ ವಿಶೇಷವಿಲ್ಲ ಎಂದರು. 


ಶಿವಮೊಗ್ಗದ ತುಂಗಾನಗರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಮಹಿಳೆಯ ಕೊಲೆ!

ಶಿವಮೊಗ್ಗ ನಗರದಲ್ಲಿ ಮಹಿಳೆಯೊಬ್ಬರ ಕೊಲೆಯಾಗಿದೆ.  ವಿಜಯ ನಗರದ 2 ನೇ ತಿರುವಿನಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದೆ. ಕಮಲಮ್ಮ(54) ಕೊಲೆಯಾದ ಮಹಿಳೆ

ಚಿಕ್ಕಮಗಳೂರಿನ ತರೀಕೆರೆ ತಾಲ್ಲೂಕು ಅಜ್ಜಂಪುರದಲ್ಲಿ ಎಕ್ಸಿಕ್ಯುಟಿವ್ ಎಂಜಿನಿಯರ್ ಆಗಿರುವ ಮಲ್ಲಿಕಾರ್ಜುನರವರ ಪತ್ನಿ ಕಮಲಮ್ಮ ಕೊಲೆಯಾಗಿದ್ದಾಳೆ . ಮಲ್ಲಿಕಾರ್ಜುನ್​ರವರು ಗೋವಾಕ್ಕೆ ತೆರಳಿದ್ರು. ಈ ವೇಳೆ ಘಟನೆ ನಡೆದಿದೆ. ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಬಗ್ಗೆ ವರದಿಯಾಗಿದೆ. ನಿನ್ನೆ ಸಂಜೆ  ಘಟನೆ ನಡೆದಿರುವ ಸಾಧ್ಯತೆ ಇದ್ದು ಸ್ಥಳಕ್ಕೆ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ. 

ಗೋವಾಕ್ಕೆ ತೆರಳಿದ್ದ ಮಲ್ಲಿಕಾರ್ಜುನ್​ರವರು ಮನೆಗೆ ಕರೆ ಮಾಡಿದಾಗ ಫೋನ್ ಕಾಲ್ ಯಾರು ಸ್ವೀಕರಿಸಲಿಲ್ಲ. ಹೀಗಾಗಿ ಅನುಮಾನಗೊಂಡು ಅಕ್ಕಪಕ್ಕದವರಿಗೆ ಕರೆ ಮಾಡಿದ್ದಾರೆ. ಅಲ್ಲಿದ್ದವರು ಮನೆಗೆ ಹೋಗಿ ನೋಡಿದಾಗ ಬಾಗಿಲು ತೆರದ ಸ್ಥಿತಿಯಲ್ಲಿತ್ತು. ಒಳಗಡೆ ಮಹಿಳೆಯ ಕೊಲೆಯಾಗಿರುವುದು ಕಂಡು ಬಂದಿದೆ. ಸದ್ಯ ದಾವಣಗೆರೆಯಿಂದ ಎಫ್​ಎಸ್​ಎಲ್​ ತಂಡ ಬರುತ್ತಿದ್ದು,ಘಟನೆ ಸಂಬಂಧ ತುಂಗಾನಗರ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.